11:18 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು