10:04 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು