7:43 AM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು