6:40 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು