1:42 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು