10:41 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು