3:06 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Karavali | ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿಯೇ ಸಿರಿ: ಲೇಖಕಿ ಭುವನೇಶ್ವರಿ ಹೆಗಡೆ

08/03/2025, 00:27

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿ ಪ್ರದೇಶದಲ್ಲಿ ಸತ್ಯ- ಧರ್ಮ – ನ್ಯಾಯಗಳ ಪ್ರಖರ ಪ್ರತಿಪಾದಕಿಯಾಗಿ ಸ್ತ್ರೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ದೇವತೆಯೇ ಸಿರಿ. ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿ, ಇಲ್ಲಿಯ ನಂಬಿಕೆಯ ದೈವವಾದ’ಸಿರಿ’ಯೇ ಆಗಿದ್ದಾಳೆ ಎಂದು ಖ್ಯಾತ ಲೇಖಕಿ ಭುವನೇಶ್ವರಿ ಹೆಗಡೆ ಹೇಳಿದರು.


ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಹಾಗೂ ನ್ಯಾಯಾಲಯದ ಉದ್ಯೋಗಿಗಳ ಸಂಘಗಳು ಜಂಟಿಯಾಗಿ ಏರ್ಪಡಿಸಿದ್ದ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಮತ್ತು ಸೆಷನ್ ಹೆಚ್ಚುವರಿ ನ್ಯಾಯಾಧೀಶರಾದ ಪ್ರೀತಿ. ಕೆ.ಪಿ. ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಹೋರಾಟದ ಹಿನ್ನೆಲೆಯನ್ನು ವಿವರಿಸಿ ಅದಕ್ಕಾಗಿ ಹೋರಾಡಿದ ಮಹಿಳೆಯರನ್ನು ಸ್ಮರಿಸಿದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ, ದಕ್ಷಿಣ ಕನ್ನಡ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕ್ ಅವರು ಇಂದಿನ ಸುಶಿಕ್ಷಿತ ಮಹಿಳೆಯರ ಎದುರು ಅನೇಕ ಸವಾಲುಗಳಿವೆ. ತಮ್ಮ ಆತ್ಮವಿಶ್ವಾಸದಿಂದ ಅವುಗಳನ್ನು ಎದುರಿಸುವ ಛಲ ಹೊಂದಬೇಕು ಎಂದರು.



ವಿವಿಧ ವಿಭಾಗಗಳ ಹಿರಿಯ ನ್ಯಾಯಾಧೀಶರುಗಳು, ಹಿರಿಕಿರಿಯ ವಕೀಲೆಯರು, ಸಿಬ್ಬಂದಿಗಳು ಹಾಜರಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ಅವರು ವಹಿಸಿದ್ದರು. ರಶ್ಮಿ ವಂದಿಸಿದರು.ವಕೀಲ ಸಾಧಕಿಯರನ್ನು ಸನ್ಮಾನಿಸಲಾಯಿತು.
ಕೊನೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು