5:22 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Karavali | ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿಯೇ ಸಿರಿ: ಲೇಖಕಿ ಭುವನೇಶ್ವರಿ ಹೆಗಡೆ

08/03/2025, 00:27

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿ ಪ್ರದೇಶದಲ್ಲಿ ಸತ್ಯ- ಧರ್ಮ – ನ್ಯಾಯಗಳ ಪ್ರಖರ ಪ್ರತಿಪಾದಕಿಯಾಗಿ ಸ್ತ್ರೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ದೇವತೆಯೇ ಸಿರಿ. ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿ, ಇಲ್ಲಿಯ ನಂಬಿಕೆಯ ದೈವವಾದ’ಸಿರಿ’ಯೇ ಆಗಿದ್ದಾಳೆ ಎಂದು ಖ್ಯಾತ ಲೇಖಕಿ ಭುವನೇಶ್ವರಿ ಹೆಗಡೆ ಹೇಳಿದರು.


ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಹಾಗೂ ನ್ಯಾಯಾಲಯದ ಉದ್ಯೋಗಿಗಳ ಸಂಘಗಳು ಜಂಟಿಯಾಗಿ ಏರ್ಪಡಿಸಿದ್ದ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಮತ್ತು ಸೆಷನ್ ಹೆಚ್ಚುವರಿ ನ್ಯಾಯಾಧೀಶರಾದ ಪ್ರೀತಿ. ಕೆ.ಪಿ. ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಹೋರಾಟದ ಹಿನ್ನೆಲೆಯನ್ನು ವಿವರಿಸಿ ಅದಕ್ಕಾಗಿ ಹೋರಾಡಿದ ಮಹಿಳೆಯರನ್ನು ಸ್ಮರಿಸಿದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ, ದಕ್ಷಿಣ ಕನ್ನಡ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕ್ ಅವರು ಇಂದಿನ ಸುಶಿಕ್ಷಿತ ಮಹಿಳೆಯರ ಎದುರು ಅನೇಕ ಸವಾಲುಗಳಿವೆ. ತಮ್ಮ ಆತ್ಮವಿಶ್ವಾಸದಿಂದ ಅವುಗಳನ್ನು ಎದುರಿಸುವ ಛಲ ಹೊಂದಬೇಕು ಎಂದರು.



ವಿವಿಧ ವಿಭಾಗಗಳ ಹಿರಿಯ ನ್ಯಾಯಾಧೀಶರುಗಳು, ಹಿರಿಕಿರಿಯ ವಕೀಲೆಯರು, ಸಿಬ್ಬಂದಿಗಳು ಹಾಜರಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ಅವರು ವಹಿಸಿದ್ದರು. ರಶ್ಮಿ ವಂದಿಸಿದರು.ವಕೀಲ ಸಾಧಕಿಯರನ್ನು ಸನ್ಮಾನಿಸಲಾಯಿತು.
ಕೊನೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು