3:43 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಕರಾವಳಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿರುವ ನಿರ್ಬಂಧ ತೆರವಿಗೆ ಕ್ರಮ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ 

13/10/2021, 19:15

ಉಡುಪಿ(reporterkarnataka.com): ರಾಜ್ಯದ ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಉಡುಪಿ ಕುಂತಲ ನಗರದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘ ಆಯೋಜಿಸಿದ್ದ ಕನ್ವೆನ್ಷನ್ ಸೆಂಟರ್ ಮತ್ತು ತರಬೇತಿ ಕೇಂದ್ರ ಕೇಂದ್ರವನ್ನು ಇಂದು ಉದ್ಘಾಟಿಸಿ, ಬಳಿಕ ಉದ್ಯಮಿಗಳೊಂದಿಗೆ ನಡೆಸಿದ ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು. 

ನಮ್ಮ ಪಕ್ಕದ ರಾಜ್ಯಗಳಾದ ಕೇರಳ ಮತ್ತು ಗೋವಾದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲಾಗಿದೆ. ಆ ಮೂಲಕ ಹೆಚ್ಚಿನ ಆದಾಯವನ್ನು ಗಳಿಸಿಕೊಳ್ಳುತ್ತಿವೆ. ಆದರೆ ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಎಷ್ಟು ಸದ್ಬಳಕೆ ಮಾಡಿಕೊಳ್ಳಬೇಕಿತ್ತೋ ಅಷ್ಟು ಆಗಿಲ್ಲ ಎಂದು ಅವರು ವಿಷಾದಿಸಿದರು.  


ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ನಡೆಸದಂತೆ ನಿರ್ಬಂಧ ಹಾಕಿರುವ ಕಾನೂನು ರಾಜ್ಯದಲ್ಲಿ ಜಾರಿಯಲ್ಲಿದೆ. ಇದರಿಂದ ಪ್ರವಾಸೋದ್ಯಮ ಉತ್ತೇಜನಕ್ಕೆ ಅಡ್ಡಿಯಾಗುತ್ತದೆ ಎಂಬ ಆರೋಪವೂ ಇದೆ. ಹೀಗಾಗಿ ಈ ಕಾನೂನನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು