4:02 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕರಾವಳಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿರುವ ನಿರ್ಬಂಧ ತೆರವಿಗೆ ಕ್ರಮ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ 

13/10/2021, 19:15

ಉಡುಪಿ(reporterkarnataka.com): ರಾಜ್ಯದ ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಉಡುಪಿ ಕುಂತಲ ನಗರದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘ ಆಯೋಜಿಸಿದ್ದ ಕನ್ವೆನ್ಷನ್ ಸೆಂಟರ್ ಮತ್ತು ತರಬೇತಿ ಕೇಂದ್ರ ಕೇಂದ್ರವನ್ನು ಇಂದು ಉದ್ಘಾಟಿಸಿ, ಬಳಿಕ ಉದ್ಯಮಿಗಳೊಂದಿಗೆ ನಡೆಸಿದ ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು. 

ನಮ್ಮ ಪಕ್ಕದ ರಾಜ್ಯಗಳಾದ ಕೇರಳ ಮತ್ತು ಗೋವಾದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲಾಗಿದೆ. ಆ ಮೂಲಕ ಹೆಚ್ಚಿನ ಆದಾಯವನ್ನು ಗಳಿಸಿಕೊಳ್ಳುತ್ತಿವೆ. ಆದರೆ ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಎಷ್ಟು ಸದ್ಬಳಕೆ ಮಾಡಿಕೊಳ್ಳಬೇಕಿತ್ತೋ ಅಷ್ಟು ಆಗಿಲ್ಲ ಎಂದು ಅವರು ವಿಷಾದಿಸಿದರು.  


ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ನಡೆಸದಂತೆ ನಿರ್ಬಂಧ ಹಾಕಿರುವ ಕಾನೂನು ರಾಜ್ಯದಲ್ಲಿ ಜಾರಿಯಲ್ಲಿದೆ. ಇದರಿಂದ ಪ್ರವಾಸೋದ್ಯಮ ಉತ್ತೇಜನಕ್ಕೆ ಅಡ್ಡಿಯಾಗುತ್ತದೆ ಎಂಬ ಆರೋಪವೂ ಇದೆ. ಹೀಗಾಗಿ ಈ ಕಾನೂನನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು