12:32 PM Saturday8 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ: ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿನಲ್ಲಿ ಹೇಳಿದ್ದೇನು? 

13/10/2021, 12:44

ಮಂಗಳೂರು(reporterkarnataka.com): ಕರಾವಳಿ ಭಾಗದಲ್ಲಿ ಆಗಾಗ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಾಗೆ ಮಾತನಾಡಿದ್ದಾರೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಇವುಗಳಿಗೆ ಧಕ್ಕೆಯಾಗದ ಹಾಗೆ ಸೌಹಾರ್ದತೆಯಿಂದ ನಾವು ಬದುಕಬೇಕು. ಆದರೆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಆ್ಯಂಡ್ ರಿಯಾಕ್ಷನ್ ನಡೆಯುತ್ತದೆ ಎಂದು ಒಂದು ರೀತಿಯಲ್ಲಿ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಸಿಎಂ ಮಾತನಾಡಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನೈತಿಕ ಪೊಲೀಸ್ ಗಿರಿ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಈ ರೀತಿ ಹಾರಿಕೆ ಉತ್ತರ ನೀಡಿದರು.


ಕಾನೂನು ಸುವ್ಯವಸ್ಥೆ ಜತೆಗೆ ಸಾಮಾಜಿಕ ಸಾಮರಸ್ಯ ಕಾಪಾಡುವುದು ಸರಕಾರದ ಕರ್ತವ್ಯ. ಯುವಕರು ಕೂಡ ಸಾಮಾಜಿಕ ಸಾಮಸ್ಯಕ್ಕೆ ಧಕ್ಕೆಯಾಗದ ಹಾಗೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕಲು ಸಾಧ್ಯವಿಲ್ಲ. ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆಯನ್ನು ಅವಲಂಬಿಸಿ ಇದೆ ಎಂದು ಅವರು ನುಡಿದರು.

ಗಡಿ ಭಾಗದಲ್ಲಿ ಕೋವಿಡ್ ನಿಬಂಧನೆಯ ಕುರಿತು ದಸರಾ ಮುಗಿದ ತಕ್ಷಣ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು. 1ನೇ ತರಗತಿಯಿಂದ ಶಾಲೆ ಆರಂಭಿಸುವ ಕುರಿತು ಕೂಡ ಅದೇ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಬೊಮ್ಮಾಯಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು