5:21 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ: ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿನಲ್ಲಿ ಹೇಳಿದ್ದೇನು? 

13/10/2021, 12:44

ಮಂಗಳೂರು(reporterkarnataka.com): ಕರಾವಳಿ ಭಾಗದಲ್ಲಿ ಆಗಾಗ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಾಗೆ ಮಾತನಾಡಿದ್ದಾರೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಇವುಗಳಿಗೆ ಧಕ್ಕೆಯಾಗದ ಹಾಗೆ ಸೌಹಾರ್ದತೆಯಿಂದ ನಾವು ಬದುಕಬೇಕು. ಆದರೆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಆ್ಯಂಡ್ ರಿಯಾಕ್ಷನ್ ನಡೆಯುತ್ತದೆ ಎಂದು ಒಂದು ರೀತಿಯಲ್ಲಿ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಸಿಎಂ ಮಾತನಾಡಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನೈತಿಕ ಪೊಲೀಸ್ ಗಿರಿ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಈ ರೀತಿ ಹಾರಿಕೆ ಉತ್ತರ ನೀಡಿದರು.


ಕಾನೂನು ಸುವ್ಯವಸ್ಥೆ ಜತೆಗೆ ಸಾಮಾಜಿಕ ಸಾಮರಸ್ಯ ಕಾಪಾಡುವುದು ಸರಕಾರದ ಕರ್ತವ್ಯ. ಯುವಕರು ಕೂಡ ಸಾಮಾಜಿಕ ಸಾಮಸ್ಯಕ್ಕೆ ಧಕ್ಕೆಯಾಗದ ಹಾಗೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕಲು ಸಾಧ್ಯವಿಲ್ಲ. ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆಯನ್ನು ಅವಲಂಬಿಸಿ ಇದೆ ಎಂದು ಅವರು ನುಡಿದರು.

ಗಡಿ ಭಾಗದಲ್ಲಿ ಕೋವಿಡ್ ನಿಬಂಧನೆಯ ಕುರಿತು ದಸರಾ ಮುಗಿದ ತಕ್ಷಣ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು. 1ನೇ ತರಗತಿಯಿಂದ ಶಾಲೆ ಆರಂಭಿಸುವ ಕುರಿತು ಕೂಡ ಅದೇ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಬೊಮ್ಮಾಯಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು