1:05 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿಗೆ ಪರಿಚಯಿಸಿದ್ದು ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ

25/11/2023, 20:51

ಬೆಂಗಳೂರು(reporterkarnataka.com):ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಮಂಗಳೂರು ಅಥವಾ ಉಡುಪಿ ಯಲ್ಲಿ ಮಾಡುವ ಬದಲು ಇಲ್ಲೇಕೆ ಮಾಡುತ್ತಿದ್ದೀರಿ ಎಂದು ಕಂಬಳದ ಸಂಘಟಕರಾದ ಅಶೋಕ್ ರೈ ಅವರಲ್ಲಿ ಕೇಳಿದೆ. ಅದಕ್ಕೆ ಅವರು ಬೆಂಗಳೂರಿನಲ್ಲಿ ಲಕ್ಷಾಂತರ ಮಂದಿ ಕರಾವಳಿಗರಿದ್ದಾರೆ. ಹಾಗೆ ಬೆಂಗಳೂರಿಗರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಸಂಖ್ಯೆಯಲ್ಲಿ ಕಂಬಳ ಪ್ರೇಮಿಗಳು ಆಗಮಿಸುತ್ತಾರೆ. ನೀವು ಕೂಡ ಬನ್ನಿ ಎಂದು ಆಹ್ವಾನಿಸಿದರು ಎಂದು ಸಿಎಂ ನುಡಿದರು.
ತುಳುವಿಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಒತ್ತಾಯದ ಕುರಿತು ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು ಹಿಂದೆ ನಿಮ್ಮದೇ ಭಾಗದವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದರು. ತುಳುವಿಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಕೆಲಸ ಮಾಡಬಹುದಿತ್ತು. ಆದರೆ ಅವರು ಮಾಡಿಲ್ಲ. ನಾವು ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು