10:42 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಖೈಬರ್ ಪಾಸ್ ಗುಡ್ಡ ಕುಸಿತ; ಟ್ರಾಫಿಕ್ ಸಿಗ್ನಲ್ ಢಮಾರ್

05/07/2023, 11:49

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರಿನ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ.

ಮುಂಗಾರು ಆರಂಭವಾಗಿ ಸುಮಾರು 33 ದಿನಗಳ ಬಳಿಕ ಸೋಮವಾರ ಕರಾವಳಿಯಲ್ಲಿ ಬಿರುಸಿನ ಮಳೆ ಬಿದ್ದಿತ್ತು. ಅಂದು ಮಂಗಳೂರಿನಲ್ಲಿ 100 ಮಿಮೀಗೂ ಅಧಿಕ ಮಳೆ ಸುರಿದಿತ್ತು. ಒಂದೇ ದಿನದ ಮಳೆಗೆ ನಗರದ ಉತ್ತರ ದಿಕ್ಕಿನ ಹೆಬ್ಬಾಗಿಲು ಎಂದೇ ಪರಿಗಣಿಸಲಾದ ಪಂಪ್ ವೆಲ್ ಪ್ರದೇಶ ಜಲಾವೃತವಾಗಿತ್ತು. ಇದರಿಂದ ವಾಹನ ಸವಾರರು, ಪಾದಚಾರಿಗಳು ನರಕಯಾತನೆ ಅನುಭವಿಸಿದ್ದಲ್ಲದೆ ಇಡೀ ನಗರವೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ವಾಸ್ತವದಲ್ಲಿ ರಾಜ್ಯದಲ್ಲಿ ಮುಂಗಾರು ಆರಂಭದಿಂದಲೇ ದುರ್ಬಲವಾಗಿತ್ತು. ಜೂನ್ ತಿಂಗಳು ಇಡೀ ಮಳೆ ಇಲ್ಲದೆ ಕಳೆದು ಹೋಯಿತು. ಇದೀಗ ಜುಲೈ ಮೊದಲ ವಾರದಲ್ಲಿ ನಿನ್ನೆ ಮತ್ತು ಮೊನ್ನೆ ಮಂಗಳೂರಿನಲ್ಲಿ ಭಾರಿ ಮಳೆಯಾಗಿದೆ. ಇಂದು ಕೂಡ ಬಿರುಸಿನ ಮಳೆಯಾಗುತ್ತಿದೆ. ಇದರ ಪರಿಣಾಮ ತಗ್ಗು ಪ್ರದೇಶ ಜಲಾವೃತವಾಗಿದೆ. ನಗರದ ಹೃದಯ ಭಾಗದ ಹಂಪನಕಟ್ಟೆ ಯ ಸಿಗ್ನಲ್ ಕೆಟ್ಟು ಹೋಗಿದೆ. ಇದರ ನಿರ್ವಹಣೆ ಮಂಗಳೂರು ಮಹಾನಗರಪಾಲಿಕೆಯದ್ದಾಗಿದೆ. ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಇಲ್ಲಿನ ಹಳೆಯ ಕಟ್ಟಡಕ್ಕೆ ಕುಸಿತದ ಭೀತಿಯುಂಟಾಗಿದೆ.


ರಸ್ತೆ ಹಾಗೂ ಮಳೆ ನೀರು ತೋಡಿನ ಅವೈಜ್ಞಾನಿಕ ಕಾಮಗಾರಿಯಿಂದ ಹಾಗೂ ಅಲ್ಲಲ್ಲಿ ಕಟ್ಟಡ ಕಾಮಗಾರಿಯ ಸಾಮಗ್ರಿಗಳು ತೋಡು ಮುಚ್ಚಿರುವುದರಿಂದ ಕೃತಕ ನೆರೆ ಉಂಟಾಗುತ್ತಿದೆ. ಎಲ್ಲಕ್ಕಿಂತ ಮಿಗಿಲಾಗಿ ರಾಜ ಕಾಲುವೆಗಳ ಒತ್ತುವರಿ ರಸ್ತೆಗೆ ನೀರು ನುಗ್ಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು