2:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕಾರವಾರ: ಕೊರೊನಾ ಕರ್ಫ್ಯೂ ನಿಯಮಗಳಿಗೆ ಮತ್ತಷ್ಟು ಕ್ರಮ ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಆದೇಶ 

23/05/2021, 20:01

ಕಾರವಾರ(reporterkarnataka news): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಮೇ 24 ರಿಂದ ಜೂನ್ 7ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತುಷ್ಟು ಕಠಿಣ ಕ್ರಮಗಳನ್ನು ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ

ಮೇ 24 ರ ಬೆಳಗ್ಗೆ 6 ಗಂಟೆಯಿಂದ ಜೂನ್ 7 ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತರಕಾರಿ, ದಿನಸಿ ಮತ್ತಿತರ ಜೀವನಾವಶ್ಯಕ ವಸ್ತುಗಳನ್ನು ಅಂಗಡಿಗಳಿಗೆ ತೆರಳಿ ಖರೀದಿ ಮಾಡಲು ಅವಕಾಶವಿದೆ. ಉಳಿದ ದಿನಗಳಲ್ಲಿ ಮನೆಮನೆಗೆ ಪೂರೈಕೆ ಮಾಡಲಾಗುತ್ತದೆ.

ಮದುವೆ ಕಾರ್ಯಗಳಿಗೆ ಅನುಮತಿ ನೀಡಲಾಗುವುದಿಲ್ಲ. ಸೂಕ್ತ ಗುರುತಿನ ಚೀಟಿ ಹೊಂದಿರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು