2:34 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕಾರವಾರ ಸಮುದ್ರದಲ್ಲಿ ಮಲ್ಪೆಯ ಬೋಟ್ ಗೆ ಬೆಂಕಿ ಅವಘಡ: ಎಲ್ಲ 7ಮಂದಿ ಮೀನುಗಾರರ ರಕ್ಷಣೆ

06/11/2021, 16:13

ಕಾರವಾರ(reporterkarnataka.com): ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅದರಲ್ಲಿದ್ದ ಎಲ್ಲ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಬೆಂಕಿ ಅನಾಹುತದಿಂದ ಬೋಟ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ದುರ್ಘಟನೆ ನಡೆಯುತ್ತಿದ್ದಂತೆಯೇ ರಕ್ಷಣೆಗೆ ಧಾವಿಸಿದ ಭಾರತೀಯ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಉಡುಪಿಯ ಮಲ್ಪೆಯ ವರದಾ ವಿನಾಯಕ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ

ಲೈಟ್‌ ಹೌಸ್ ನಡುಗುಡ್ಡೆಯಿಂದ 10 ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸುದ್ದಿ ತಿಳಿದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ, ರಕ್ಷಣೆಗೆ ಧಾವಿಸಿದ್ದಾರೆ.

ಕೂಡಲೇ ಸ್ಥಳದಲ್ಲಿದ್ದ ಇತರ ಬೋಟುಗಳ ಸಹಾಯದೊಂದಿಗೆ ಬೋಟಿನಲ್ಲಿದ್ದ ಏಳು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಬೋಟ್‌ನ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಕಾರವಾರದ ಬೈತಖೋಲ್‌ ಬಂದರಿಗೆ ಬೋಟ್‌ನ್ನು ತರಲಾಗಿದೆ. ಮೇಲ್ನೋಟಕ್ಕೆ ಇಂಜಿನ್‌ನಲ್ಲಿನ ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಕೋಸ್ಟ್‌ ಗಾರ್ಡ್‌ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು