2:57 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕಾರವಾರ ಸಮುದ್ರದಲ್ಲಿ ಮಲ್ಪೆಯ ಬೋಟ್ ಗೆ ಬೆಂಕಿ ಅವಘಡ: ಎಲ್ಲ 7ಮಂದಿ ಮೀನುಗಾರರ ರಕ್ಷಣೆ

06/11/2021, 16:13

ಕಾರವಾರ(reporterkarnataka.com): ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅದರಲ್ಲಿದ್ದ ಎಲ್ಲ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಬೆಂಕಿ ಅನಾಹುತದಿಂದ ಬೋಟ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ದುರ್ಘಟನೆ ನಡೆಯುತ್ತಿದ್ದಂತೆಯೇ ರಕ್ಷಣೆಗೆ ಧಾವಿಸಿದ ಭಾರತೀಯ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಉಡುಪಿಯ ಮಲ್ಪೆಯ ವರದಾ ವಿನಾಯಕ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ

ಲೈಟ್‌ ಹೌಸ್ ನಡುಗುಡ್ಡೆಯಿಂದ 10 ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸುದ್ದಿ ತಿಳಿದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ, ರಕ್ಷಣೆಗೆ ಧಾವಿಸಿದ್ದಾರೆ.

ಕೂಡಲೇ ಸ್ಥಳದಲ್ಲಿದ್ದ ಇತರ ಬೋಟುಗಳ ಸಹಾಯದೊಂದಿಗೆ ಬೋಟಿನಲ್ಲಿದ್ದ ಏಳು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಬೋಟ್‌ನ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಕಾರವಾರದ ಬೈತಖೋಲ್‌ ಬಂದರಿಗೆ ಬೋಟ್‌ನ್ನು ತರಲಾಗಿದೆ. ಮೇಲ್ನೋಟಕ್ಕೆ ಇಂಜಿನ್‌ನಲ್ಲಿನ ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಕೋಸ್ಟ್‌ ಗಾರ್ಡ್‌ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು