4:45 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್- ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ

01/03/2026, 15:00

ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ಪಶ್ಚಾತ್ತಾಪ, ಪ್ರಾಯಶ್ಚಿತ, ತ್ಯಾಗ ಮತ್ತು ಶಿಲುಬೆಯ ಹಾದಿಯ ಮೇಲೆ ಕೇಂದ್ರೀಕರಿಸಿವೆ. 40 ದಿನಗಳ ಅವಧಿಯ ತಪಸ್ಸು ಕಾಲದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ. ಕ್ರಿಸ್ತ ಶಕ 4 ನೇ ಶತಮಾನದಿಂದ ಅಂದರೆ ಕ್ರಿ.ಶ. 325 ರಿಂದ ತಪಸ್ಸು ಕಾಲ ಅಧಿಕೃತವಾಗಿ ಆರಂಭವಾಯಿತು ಎಂಬುದಾಗಿ ಇತಿಹಾಸದ ಪುಟಗಳಿದ ತಿಳಿದು ಬರುತ್ತದೆ. ಅಂದಿನಿಂದಲೇ ಇದಕ್ಕೆ ಸಂಬಂಧಿಸಿದ ವಿಶೇಷ ಭಕ್ತಿ ಗೀತೆಗಳ ಗಾಯನ ಪದ್ದತಿ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಇದನ್ನು ಗಮನದಲ್ಲಿ ಇರಿಸಿ ಮಾರ್ಚ್ 15ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್, ವಾಮಂಜೂರಿನ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ ಮತ್ತು ಕೆಲರಾಯ್ ಸಂತ ಅನ್ನಾ ಚರ್ಚ್ ನ ಸಹಯೋಗದಲ್ಲಿ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂಜೆ 6 ಗಂಟೆಗೆ ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್ ಎಂಬ ತಪಸ್ಸು ಕಾಲದ ಕೊಂಕಣಿ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಈ ಮೂರು ಚರ್ಚ್ ಗಳ ಗಾಯನ ಮಂಡಳಿಗಳ ಸದಸ್ಯರು ತಲಾ ನಾಲ್ಕು ಗೀತೆಗಳನ್ನು ಅವುಗಳ ವಿವರಣೆಯೊಂದಿಗೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಚರ್ಚ್ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು