6:30 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್: ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ

12/03/2026, 20:55

ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ಪಶ್ಚಾತ್ತಾಪ, ಪ್ರಾಯಶ್ಚಿತ, ತ್ಯಾಗ ಮತ್ತು ಶಿಲುಬೆಯ ಹಾದಿಯ ಮೇಲೆ ಕೇಂದ್ರೀಕರಿಸಿವೆ. 40 ದಿನಗಳ ಅವಧಿಯ ತಪಸ್ಸು ಕಾಲದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ.
ಕ್ರಿಸ್ತ ಶಕ 4ನೇ ಶತಮಾನದಿಂದ ಅಂದರೆ ಕ್ರಿ.ಶ. 325ರಿಂದ ತಪಸ್ಸು ಕಾಲ ಅಧಿಕೃತವಾಗಿ ಆರಂಭವಾಯಿತು ಎಂಬುದಾಗಿ ಇತಿಹಾಸದ ಪುಟಗಳಿದ ತಿಳಿದು ಬರುತ್ತದೆ. ಅಂದಿನಿಂದಲೇ ಇದಕ್ಕೆ ಸಂಬಂಧಿಸಿದ ವಿಶೇಷ ಭಕ್ತಿ ಗೀತೆಗಳ ಗಾಯನ ಪದ್ದತಿ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಗಮನದಲ್ಲಿ ಇರಿಸಿ ಮಾರ್ಚ್ 15ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್, ವಾಮಂಜೂರಿನ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ ಮತ್ತು ಕೆಲರಾಯ್ ಸಂತ ಅನ್ನಾ ಚರ್ಚ್ ನ ಸಹಯೋಗದಲ್ಲಿ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂಜೆ 6 ಗಂಟೆಗೆ ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್ ಎಂಬ ತಪಸ್ಸು ಕಾಲದ ಕೊಂಕಣಿ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಈ ಮೂರು ಚರ್ಚ್ ಗಳ ಗಾಯನ ಮಂಡಳಿಗಳ ಸದಸ್ಯರು ತಲಾ ನಾಲ್ಕು ಗೀತೆಗಳನ್ನು ಅವುಗಳ ವಿವರಣೆಯೊಂದಿಗೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಚರ್ಚ್ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು