3:24 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಖರ್ಗೆ ಎಐಸಿಸಿ ಅಧ್ಯಕ್ಷರಾದರೂ ಆಡಳಿತ ಗಾಂಧಿ ಕುಟುಂಬದಿಂದಲೇ: ಸಚಿವ ಸುನಿಲ್ ಕುಮಾರ್

23/10/2022, 12:01

ಉಡುಪಿ(reporterkarnataka.com):
ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ತಡವಾಗಿ ಎಚ್ಚೆತ್ತುಕೊಂಡಿದ್ದು, ಗಾಂಧಿ ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರುವುದಕ್ಕೆ ಆಗಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ‌ ಅಧ್ಯಕ್ಷರಾಗಿದ್ದರೂ, ಪಕ್ಷದ ಆಡಳಿತ ಮತ್ತು ನಿರ್ವಹಣೆ ಗಾಂಧಿ ಕುಟುಂಬದಿಂದಲೇ ನಡೆಯುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದರು
ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಮುಖಂಡ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. 75 ವರ್ಷಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಲ್ಲಿ ಮತದಾರರ ಪಟ್ಟಿ ಸಿದ್ದವಾಗಿದೆ ಎಂದರು.
ಬಿಜೆಪಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಬೂತ್ ಮಟ್ಟದಿಂದ ರಾಷ್ಟ್ರೀಯ ಅಧ್ಯಕ್ಷರವರೆಗೂ ಬದಲಾವಣೆ ಮಾಡಲಾಗುತ್ತದೆ. ಬಿಜೆಪಿಯಲ್ಲಿಯೂ ನಾಮಪತ್ರ ಸಲ್ಲಿಸಿಯೇ ಅಧ್ಯಕ್ಷರ ಆಯ್ಕೆಯಾಗುತ್ತದೆ. ಪಕ್ಷದ ಆಂತರಿಕ ವ್ಯವಸ್ಥೆಯಲ್ಲಿಯೂ 33% ಮಹಿಳೆಯರಿಗೆ ಮೀಸಲಾತಿ ಇದೆ ಎಂದು ಹೇಳಿದರು
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ನೀಡಿರುವ ಭಗವದ್ಗೀತೆಯಲ್ಲಿ ಜಿಹಾದ್ ಭೋದಿಸಲಾಗಿದೆ ಎಂಬ ಹೇಳಿಕೆಯನ್ನು ಖಂಡಿಸಿದ ಸಚಿವರು, ಈ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುತ್ತದೆಯೇ..? ತನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಶಿವರಾಜ್ ಪಾಟೀಲ್ ಮೂಲಕ ಹೇಳಿಸಿದೆಯೇ..? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು