11:48 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಖರ್ಗೆ ಎಐಸಿಸಿ ಅಧ್ಯಕ್ಷರಾದರೂ ಆಡಳಿತ ಗಾಂಧಿ ಕುಟುಂಬದಿಂದಲೇ: ಸಚಿವ ಸುನಿಲ್ ಕುಮಾರ್

23/10/2022, 12:01

ಉಡುಪಿ(reporterkarnataka.com):
ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ತಡವಾಗಿ ಎಚ್ಚೆತ್ತುಕೊಂಡಿದ್ದು, ಗಾಂಧಿ ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರುವುದಕ್ಕೆ ಆಗಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ‌ ಅಧ್ಯಕ್ಷರಾಗಿದ್ದರೂ, ಪಕ್ಷದ ಆಡಳಿತ ಮತ್ತು ನಿರ್ವಹಣೆ ಗಾಂಧಿ ಕುಟುಂಬದಿಂದಲೇ ನಡೆಯುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದರು
ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಮುಖಂಡ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. 75 ವರ್ಷಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಲ್ಲಿ ಮತದಾರರ ಪಟ್ಟಿ ಸಿದ್ದವಾಗಿದೆ ಎಂದರು.
ಬಿಜೆಪಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಬೂತ್ ಮಟ್ಟದಿಂದ ರಾಷ್ಟ್ರೀಯ ಅಧ್ಯಕ್ಷರವರೆಗೂ ಬದಲಾವಣೆ ಮಾಡಲಾಗುತ್ತದೆ. ಬಿಜೆಪಿಯಲ್ಲಿಯೂ ನಾಮಪತ್ರ ಸಲ್ಲಿಸಿಯೇ ಅಧ್ಯಕ್ಷರ ಆಯ್ಕೆಯಾಗುತ್ತದೆ. ಪಕ್ಷದ ಆಂತರಿಕ ವ್ಯವಸ್ಥೆಯಲ್ಲಿಯೂ 33% ಮಹಿಳೆಯರಿಗೆ ಮೀಸಲಾತಿ ಇದೆ ಎಂದು ಹೇಳಿದರು
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ನೀಡಿರುವ ಭಗವದ್ಗೀತೆಯಲ್ಲಿ ಜಿಹಾದ್ ಭೋದಿಸಲಾಗಿದೆ ಎಂಬ ಹೇಳಿಕೆಯನ್ನು ಖಂಡಿಸಿದ ಸಚಿವರು, ಈ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುತ್ತದೆಯೇ..? ತನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಶಿವರಾಜ್ ಪಾಟೀಲ್ ಮೂಲಕ ಹೇಳಿಸಿದೆಯೇ..? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು