7:35 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕರಿಮಣಿ ಸರ ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ

28/07/2023, 11:14

ಮಂಗಳೂರು(reporterkarnataka.com): ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಕರಿಮಣಿ ಸರ ಕುಸಿದು ಸುಲಿಗೆ ಮಾಡಿದ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
2000, ಡಿಸೆಂಬರ್ 17ರಂದು ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹುಸೇನ್ ಅಲಿಯಾಸ್ ಮೊಹಮ್ಮದ್ ಹುಸೇನ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರ ಮೇಲೆ ಕೇಸು ದಾಖಲಿಸಿ ಬಂಧಿಸಲಾಗಿತ್ತು. ಇನ್ನೊರ್ವ ಆರೋಪಿ ಉಳ್ಳಾಲದ
ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದ. ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಜುಲೈ 26ರಂದು ಆರೋಪಿಯನ್ನು ಮೇಲಾಧಿಕಾರಿಗಳ ಸೂಕ್ತ ಮಾರ್ಗದರ್ಶನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು