6:34 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಾರಿನ ಬ್ರೇಕ್ ಫೈಲ್: ಪ್ರತಿಪಕ್ಷ ಉಪ ನಾಯಕ ಯು. ಟಿ. ಖಾದರ್ ಅಪಾಯದಿಂದ ಪಾರು

09/12/2022, 21:48

ಮಂಗಳೂರು(reporterkarnataka.com): ಪ್ರತಿಪಕ್ಷದ ಉಪನಾಯಕ ಹಾಗೂ ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರ್ ಬ್ರೇಕ್ ಫೈಲ್ ಆಗಿದ್ದು, ಅದೃಷ್ಟವಶಾತ್ ಖಾದರ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಶುಕ್ರವಾರ ಅಪರಾಹ್ನ ಈ ಘಟನೆ ಬಂಟ್ವಾಳ ಬಂಟರ ಭವನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದಾಗ ನಡೆದಿದೆ. ಪಡೀಲ್ ಬಳಿಯ ಕಣ್ಣೂರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಸಮೀಪ ಕಾರಿನ ಬ್ರೇಕ್ ಫೈಲ್ ಆಗಿದ್ದು, ಚಾಲಕ ಲಿಬ್ಜಿತ್ ತಕ್ಷಣ ಕಾರು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಬದಲಿ ಕಾರಿನಲ್ಲಿ ಖಾದರ್ ಅವರು ಮಂಗಳೂರಿಗೆ ಪ್ರಯಾಣ ಬೆಳೆಸಿದರು. ಅದೃಷ್ಟವಶತ್ ಶಾಸಕರು ಹಾಗೂ ಕಾರಲ್ಲಿದ್ದವರು ಏನೂ ಅಪಾಯವಾಗದೆ ಪಾರಾಗಿದ್ದಾರೆ.

ಈ ಬಗ್ಗೆ ಕಾರಿನ ಚಾಲಕ ಲಿಬ್ಜಿತ್ ರಿಪೋಟರ್ ಕರ್ನಾಟಕಕ್ಕೆ ಪ್ರತಿಕ್ರಿಸಿ, ನಗರದ ಪಡೀಲ್ ನ ಟೊಯೋಟಾ ಶೋರೂಮ್ ನಲ್ಲಿ ಕಾರನ್ನು ಸರ್ವಿಸ್ ಆಗಿ ತಂದು ಇಂದಿಗೆ 5 ದಿನ ಮಾತ್ರ ಆಗಿದ್ದು. ಅದಲ್ಲದೆ ಶಾಸಕರಿಲ್ಲದೆ ದಿನಕ್ಕೆ 10 ಕಿ.ಮೀ. ಓಡಿರಬಹದು. ಗೇರ್ ನಿಂದ ಕಂಟ್ರೋಲ್ ಮಾಡಿ ಕಾರು ನಿಲ್ಲಿಸಿದ್ದೇನೆ. ದೇವರ ದಯೆಯಿಂದ ಅವಘಡ ಏನು ಆಗಿಲ್ಲ. ಶಾಸಕರಿಗೆ ಏನು ಆಗಿಲ್ಲ. ನಂತರ ಬೇರೆ ಕಾರಿನ ವ್ಯವಸ್ಥೆ ಮಾಡಿದ್ದೇನೆ. ಈ ಬಗ್ಗೆ ಶೋರೂಮ್ ತೆರಳಿ ಕೇಳಿದ್ರೆ. ಬ್ರೇಕ್ ಲಿಕ್ವಿಡ್ ಹೋಗಿರಬಹುದು ಎಂದು ಉಡಾಫೆ ಉತ್ತರ ನೀಡಿದ್ದಾರೆ.
ಒಬ್ಬ ಜನ ಪ್ರತಿನಿಧಿಗೆ ಸರಿಯಾದ ಸರ್ವಿಸ್ ನೀಡಲಾಗಿಲ್ಲವಾದರೆ ಜನ ಸಾಮಾನ್ಯರಿಗೆ ಸಮಾಧಾನಕರ ಉತ್ತರಸಿಗಬಹುದೇ ಎಂಬುದು ಅವರ ಅಳಲು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು