1:14 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಕಾರ್ಕಳ: ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, ಮತ್ತೊಬ್ಬ ಪರಾರಿ

04/07/2022, 21:18

ಕಾರ್ಕಳ(reporterkarnataka.com): ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ದನ ಸಾಗಿಸುತ್ತಿದ್ದ ಕಾರನ್ನು ಹೆಬ್ರಿ ಪೋಲೀಸರು ಬೆನ್ನಟ್ಟಿ ಚಾರ ಗ್ರಾಮದ ನವೋದಯ ಶಾಲೆ ಬಳಿ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಶಕಿಲ್ ಅಹಮದ್ ಟಿ.ಕೆ. ಎಂದು ಗುರುತಿಸಲಾಗಿದೆ. ಜಾನುವಾರುಗಳ ಕೈಕಾಲು ಕಟ್ಟಿ ಅತ್ಯಂತ ಕ್ರೂರವಾಗಿ ಕಾರಿನಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು.

ಹೆಬ್ರಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಭಾನುವಾರ ರಾತ್ರಿ ಪೊಲೀಸರು ಚಾರ ನವೋದಯ ಶಾಲೆಯ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ರಾತ್ರಿ ೮.೩೦ರ ವೇಳೆಗೆ ಬೇಳಂಜೆ ಕಡೆಯಿಂದ ಬಂದ ಸ್ವಿಫ್ಟ್ ಕಾರನ್ನು ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಕಾರಿನಲ್ಲಿದ್ದವರು ಕಾರನ್ನು ನಿಲ್ಲಿಸದೆ ಹೆಬ್ರಿ ಕಡೆಗೆ ವೇಗವಾಗಿ ಚಲಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಕಾರನ್ನು ಬೆನ್ನಟ್ಟಿದಾಗ ಕಾರಿನವನು ಚಾರ ಸರ್ಕಲ್‌ನಿಂದ ಬ್ರಹ್ಮಾವರ ರಸ್ತೆಗೆ ಹೋಗಿ ಮಂಡಾಡಿಜೆಡ್ಡು ಕೆರೆಬೆಟ್ಟು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಕಾರಿನಿಂದಿಳಿದು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಶಖಿಲ್ ಅಹಮದ್ ಟಿ.ಕೆ ಎಂಬವನನ್ನು ಹಿಡಿದಿದ್ದಾರೆ, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿದ ದನಗಳನ್ನು ಕಳವು ಮಾಡಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾನೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಸಿದ್ದರದ ಒಂದು ಜಾನುವಾರು ಕಾರಿನಲ್ಲೇ ಮೃತಪಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು