9:56 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕಾರ್ಕಳ: ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, ಮತ್ತೊಬ್ಬ ಪರಾರಿ

04/07/2022, 21:18

ಕಾರ್ಕಳ(reporterkarnataka.com): ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ದನ ಸಾಗಿಸುತ್ತಿದ್ದ ಕಾರನ್ನು ಹೆಬ್ರಿ ಪೋಲೀಸರು ಬೆನ್ನಟ್ಟಿ ಚಾರ ಗ್ರಾಮದ ನವೋದಯ ಶಾಲೆ ಬಳಿ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಶಕಿಲ್ ಅಹಮದ್ ಟಿ.ಕೆ. ಎಂದು ಗುರುತಿಸಲಾಗಿದೆ. ಜಾನುವಾರುಗಳ ಕೈಕಾಲು ಕಟ್ಟಿ ಅತ್ಯಂತ ಕ್ರೂರವಾಗಿ ಕಾರಿನಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು.

ಹೆಬ್ರಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಭಾನುವಾರ ರಾತ್ರಿ ಪೊಲೀಸರು ಚಾರ ನವೋದಯ ಶಾಲೆಯ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ರಾತ್ರಿ ೮.೩೦ರ ವೇಳೆಗೆ ಬೇಳಂಜೆ ಕಡೆಯಿಂದ ಬಂದ ಸ್ವಿಫ್ಟ್ ಕಾರನ್ನು ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಕಾರಿನಲ್ಲಿದ್ದವರು ಕಾರನ್ನು ನಿಲ್ಲಿಸದೆ ಹೆಬ್ರಿ ಕಡೆಗೆ ವೇಗವಾಗಿ ಚಲಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಕಾರನ್ನು ಬೆನ್ನಟ್ಟಿದಾಗ ಕಾರಿನವನು ಚಾರ ಸರ್ಕಲ್‌ನಿಂದ ಬ್ರಹ್ಮಾವರ ರಸ್ತೆಗೆ ಹೋಗಿ ಮಂಡಾಡಿಜೆಡ್ಡು ಕೆರೆಬೆಟ್ಟು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಕಾರಿನಿಂದಿಳಿದು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಶಖಿಲ್ ಅಹಮದ್ ಟಿ.ಕೆ ಎಂಬವನನ್ನು ಹಿಡಿದಿದ್ದಾರೆ, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿದ ದನಗಳನ್ನು ಕಳವು ಮಾಡಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾನೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಸಿದ್ದರದ ಒಂದು ಜಾನುವಾರು ಕಾರಿನಲ್ಲೇ ಮೃತಪಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು