5:35 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾರ್ಕಳ: ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, ಮತ್ತೊಬ್ಬ ಪರಾರಿ

04/07/2022, 21:18

ಕಾರ್ಕಳ(reporterkarnataka.com): ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ದನ ಸಾಗಿಸುತ್ತಿದ್ದ ಕಾರನ್ನು ಹೆಬ್ರಿ ಪೋಲೀಸರು ಬೆನ್ನಟ್ಟಿ ಚಾರ ಗ್ರಾಮದ ನವೋದಯ ಶಾಲೆ ಬಳಿ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಶಕಿಲ್ ಅಹಮದ್ ಟಿ.ಕೆ. ಎಂದು ಗುರುತಿಸಲಾಗಿದೆ. ಜಾನುವಾರುಗಳ ಕೈಕಾಲು ಕಟ್ಟಿ ಅತ್ಯಂತ ಕ್ರೂರವಾಗಿ ಕಾರಿನಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು.

ಹೆಬ್ರಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಭಾನುವಾರ ರಾತ್ರಿ ಪೊಲೀಸರು ಚಾರ ನವೋದಯ ಶಾಲೆಯ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ರಾತ್ರಿ ೮.೩೦ರ ವೇಳೆಗೆ ಬೇಳಂಜೆ ಕಡೆಯಿಂದ ಬಂದ ಸ್ವಿಫ್ಟ್ ಕಾರನ್ನು ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಕಾರಿನಲ್ಲಿದ್ದವರು ಕಾರನ್ನು ನಿಲ್ಲಿಸದೆ ಹೆಬ್ರಿ ಕಡೆಗೆ ವೇಗವಾಗಿ ಚಲಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಕಾರನ್ನು ಬೆನ್ನಟ್ಟಿದಾಗ ಕಾರಿನವನು ಚಾರ ಸರ್ಕಲ್‌ನಿಂದ ಬ್ರಹ್ಮಾವರ ರಸ್ತೆಗೆ ಹೋಗಿ ಮಂಡಾಡಿಜೆಡ್ಡು ಕೆರೆಬೆಟ್ಟು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಕಾರಿನಿಂದಿಳಿದು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಶಖಿಲ್ ಅಹಮದ್ ಟಿ.ಕೆ ಎಂಬವನನ್ನು ಹಿಡಿದಿದ್ದಾರೆ, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿದ ದನಗಳನ್ನು ಕಳವು ಮಾಡಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾನೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಸಿದ್ದರದ ಒಂದು ಜಾನುವಾರು ಕಾರಿನಲ್ಲೇ ಮೃತಪಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು