1:53 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ  ಹಾಗೂ ಬೃಹತ್ ಶೋಭಾಯಾತ್ರೆ

04/12/2021, 16:31

ಕಾರ್ಕಳ(reporterkarnataka.com):
ಕಾರ್ಕಳದ ಗಾಂಧಿ ಮೈದಾನದಲ್ಲಿ  ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. 

ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತಿಯ ಅಂಗವಾಗಿ ಡಿ.12ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಹಿಂದೂ ಸಂಗಮದಲ್ಲಿ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ಸೇರುವ ನಿರೀಕ್ಷೆಯಿದೆ. ಸ್ವರಾಜ್ಯ ಮೈದಾನದಿಂದ ಗಾಂಧಿ ಮೈದಾನದವರೆಗೆ ಭಜನಾ ತಂಡ, ವಿವಿಧ ಟ್ಯಾಬ್ಲೋಗಳೊಂದಿಗೆ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು

ಸಭೆಯನ್ನು ಉದ್ದೇಶಿಸಿ ಸಾಧ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಲಿದ್ದು, ಪೇಜಾವರ ಸ್ವಾಮೀಜಿಯವರು ಹಾಗೂ ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್  ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಮತ್ತು ಜಾಗೃತಿಗಾಗಿ,  ಪೂರ್ವಭಾವಿಯಾಗಿ ಧರ್ಮರಕ್ಷ ರಥ ತಾಲೂಕಿನಾದ್ಯಂತ ಗ್ರಾಮ ಗ್ರಾಮಗಳಿಗೆ ಸಂಚರಿಸುತ್ತಿದ್ದು, ಡಿ 5ರಂದು ಕಾರ್ಕಳ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಸುನಿಲ್ ಕೆ.ಆರ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಹಿಂದೂ ಭಾಂಧವರು ಭಾಗವಹಿಸಿ ಹಿಂದೂ ಸಮಾಜದಲ್ಲಿ ವಿಶ್ವಾಸವನ್ನು ತುಂಬಿಸುವ ಕೆಲಸ ಮತ್ತು ಜಾಗೃತ, ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣವಾಗುವಂತಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿ ಸುಧೀರ್ ನಿಟ್ಟೆ, ಕಾರ್ಕಳ ಬಜರಂಗದಳ ಸಂಚಾಲಕ ಚೇತನ್ ಪೇರಾಲ್ಕೆ, ವಿ.ಹಿಂ.ಪ. ಜಿಲ್ಲಾ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ಹರಿಪ್ರಸಾದ್ ಶೆಟ್ಟಿ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು