5:17 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ  ಹಾಗೂ ಬೃಹತ್ ಶೋಭಾಯಾತ್ರೆ

04/12/2021, 16:31

ಕಾರ್ಕಳ(reporterkarnataka.com):
ಕಾರ್ಕಳದ ಗಾಂಧಿ ಮೈದಾನದಲ್ಲಿ  ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. 

ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತಿಯ ಅಂಗವಾಗಿ ಡಿ.12ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಹಿಂದೂ ಸಂಗಮದಲ್ಲಿ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ಸೇರುವ ನಿರೀಕ್ಷೆಯಿದೆ. ಸ್ವರಾಜ್ಯ ಮೈದಾನದಿಂದ ಗಾಂಧಿ ಮೈದಾನದವರೆಗೆ ಭಜನಾ ತಂಡ, ವಿವಿಧ ಟ್ಯಾಬ್ಲೋಗಳೊಂದಿಗೆ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು

ಸಭೆಯನ್ನು ಉದ್ದೇಶಿಸಿ ಸಾಧ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಲಿದ್ದು, ಪೇಜಾವರ ಸ್ವಾಮೀಜಿಯವರು ಹಾಗೂ ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್  ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಮತ್ತು ಜಾಗೃತಿಗಾಗಿ,  ಪೂರ್ವಭಾವಿಯಾಗಿ ಧರ್ಮರಕ್ಷ ರಥ ತಾಲೂಕಿನಾದ್ಯಂತ ಗ್ರಾಮ ಗ್ರಾಮಗಳಿಗೆ ಸಂಚರಿಸುತ್ತಿದ್ದು, ಡಿ 5ರಂದು ಕಾರ್ಕಳ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಸುನಿಲ್ ಕೆ.ಆರ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಹಿಂದೂ ಭಾಂಧವರು ಭಾಗವಹಿಸಿ ಹಿಂದೂ ಸಮಾಜದಲ್ಲಿ ವಿಶ್ವಾಸವನ್ನು ತುಂಬಿಸುವ ಕೆಲಸ ಮತ್ತು ಜಾಗೃತ, ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣವಾಗುವಂತಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿ ಸುಧೀರ್ ನಿಟ್ಟೆ, ಕಾರ್ಕಳ ಬಜರಂಗದಳ ಸಂಚಾಲಕ ಚೇತನ್ ಪೇರಾಲ್ಕೆ, ವಿ.ಹಿಂ.ಪ. ಜಿಲ್ಲಾ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ಹರಿಪ್ರಸಾದ್ ಶೆಟ್ಟಿ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು