10:32 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಕಾರ್ಕಳದಿಂದ ಬಿಜೆಪಿ ಸ್ಪರ್ಧಿಸದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಕಮಲ ನಾಯಕರಿಗೆ ಆಗ್ರಹ

04/02/2023, 12:18

ಚಿಕ್ಕಮಗಳೂರು(reporterkarnataka.com): ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕಾರ್ಕಳದಲ್ಲಿ ಅಭ್ಯರ್ಥಿ ಹಾಕದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಆಗ್ರಹಿಸಿದೆ.
ಬಿಜೆಪಿ‌ ಪ್ರಮುಖ ನಾಯಕರಿಗೆ ಚಿಕ್ಕಮಗಳೂರು ಶ್ರೀರಾಮಸೇನೆಯು ಈ ಆಗ್ರಹವನ್ನು ಮಾಡಿದೆ.

ಕಾರ್ಕಳದಲ್ಲಿ ಬಿಜೆಪಿಯು ಅಭ್ಯರ್ಥಿ ಹಾಕಿದ್ದಲ್ಲಿ ಚಿಕ್ಕಮಗಳೂರಿನಲ್ಲಿಯೂ ಶ್ರೀರಾಮಸೇನೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಕೆ ನೀಡಿದೆ. ಇದನ್ನು ಹಿಂದೂ ಸಂಘಟನೆಗಳು ಗಂಭೀರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶ್ರೀರಾಮಸೇನೆ ಎಚ್ಚರಿಸಿದೆ.

ಬಿಜೆಪಿ ಬೆಳವಣಿಗೆಗೆ ಪ್ರಮೋದ್ ಮುತಾಲಿಕ್ ಮಹತ್ತರ ಪಾತ್ರವಿರುವುದು ಜಗಜ್ಜಾಹಿರು.ಉತ್ತರ ಕರ್ನಾಟಕ, ಕರಾವಳಿಯಲ್ಲಿ ಬಿಜೆಪಿ ನೆಲೆಯೂರಲು ಮುತಾಲಿಕ್ ಕಾರಣಿಕರ್ತರು ಎಂದು ಚಿಕ್ಕಮಗಳೂರು ಶ್ರೀರಾಮಸೇನೆ ರಾಷ್ಟ್ರ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು