11:46 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಾರ್ಕಳ: ಬೆಂಕಿ ಅನಾಹುತ; ಕಂಬಳ ಕೋಣ ಥೊನ್ಸೆ ಮತ್ತು ಅಪ್ಪು ಬಲಿ

31/05/2025, 19:15

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕನಹಲಗೆಯ ಎರಡು ಹೆಸರಾಂತ ಕಂಬಳ ಕೋಣಗಳು – ಥೊನ್ಸೆ ಮತ್ತು ಅಪ್ಪು – ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿಗೆ ಬಲಿಯಾಗಿವೆ.


ಈ ಕೋಣಗಳು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಕಂಬಳಗಳಲ್ಲಿ ಭಾರಿ ಬಹುಮಾನಗಳನ್ನು ಗೆದ್ದಿದ್ದವು.
ಘಟನೆ ರಾತ್ರಿ ಸಂಭವಿಸಿದ್ದು, ಹತ್ತಿರವಿದ್ದ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಅದರ ಬಿಳವಣಿಗೆ ತಡೆಗಟ್ಟಲಾಗಲಿಲ್ಲ. ಹಟ್ಟಿಗೆ ಸೇರ್ಪಡೆಯಾಗಿ ಇದ್ದ ಭತ್ತದ ಬಣವೆಗೆ ಬೆಂಕಿ ಬಿದ್ದ ಕಾರಣ, ಉರಿಯುವ ವ್ಯಾಪ್ತಿ ಹೆಚ್ಚಾಗಿ ಕಟ್ಟಿಹಾಕಿದ್ದ ಕೋಣಗಳ ಸಹಿತವು ಬೆಂಕಿಗೆ ಆಹುತಿಯಾಗಿವೆ.
ಸ್ಥಳೀಯರ ಪ್ರಕಾರ, ಬೆಂಕಿಯ ತೀವ್ರತೆಯಿಂದಾಗಿ ಥೊನ್ಸೆ ಮತ್ತು ಅಪ್ಪು ಸ್ಥಳದಲ್ಲೇ ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ಕಂಬಳ ಕೋಣಗಳನ್ನು ಸಾಕಲು ಮಾಲೀಕರಾದ ಅಶೋಕ್ ಶೆಟ್ಟಿ ವರ್ಷಗಳಿಂದ ಶ್ರಮಪಟ್ಟು ಬೆಳೆಸಿದ್ದರು. ಈ ಕಣ್ಮಣಿಗಳ ಸಾವಿಗೆ ಹಳ್ಳಿ ಜನತೆಯಲ್ಲಿ ಆಘಾತ ಮತ್ತು ದುಃಖದ ಛಾಯೆ ಹರಡಿದೆ.
“ಥೊನ್ಸೆ ಮತ್ತು ಅಪ್ಪು ಮಾತ್ರ ಕೋಣಗಳು ಅಲ್ಲ. ಅವು ನಮ್ಮ ಕುಟುಂಬದ ಸದಸ್ಯರಂತಾಗಿದ್ದವು. ಇಂತಹದು ಆಗಲಿದೆ ಅಂತ ಕನಸೂ ಕಂಡಿರಲಿಲ್ಲ,” ಎಂದು ದುಃಖಭರಿತ ಕಂಠದಲ್ಲಿ ಮಾಲಿಕ ಅಶೋಕ್ ಶೆಟ್ಟಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು