9:16 PM Monday11 - August 2025
ಬ್ರೇಕಿಂಗ್ ನ್ಯೂಸ್
ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್…

ಇತ್ತೀಚಿನ ಸುದ್ದಿ

ಕಾರ್ಕಳ: ಬೆಂಕಿ ಅನಾಹುತ; ಕಂಬಳ ಕೋಣ ಥೊನ್ಸೆ ಮತ್ತು ಅಪ್ಪು ಬಲಿ

31/05/2025, 19:15

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕನಹಲಗೆಯ ಎರಡು ಹೆಸರಾಂತ ಕಂಬಳ ಕೋಣಗಳು – ಥೊನ್ಸೆ ಮತ್ತು ಅಪ್ಪು – ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿಗೆ ಬಲಿಯಾಗಿವೆ.


ಈ ಕೋಣಗಳು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಕಂಬಳಗಳಲ್ಲಿ ಭಾರಿ ಬಹುಮಾನಗಳನ್ನು ಗೆದ್ದಿದ್ದವು.
ಘಟನೆ ರಾತ್ರಿ ಸಂಭವಿಸಿದ್ದು, ಹತ್ತಿರವಿದ್ದ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಅದರ ಬಿಳವಣಿಗೆ ತಡೆಗಟ್ಟಲಾಗಲಿಲ್ಲ. ಹಟ್ಟಿಗೆ ಸೇರ್ಪಡೆಯಾಗಿ ಇದ್ದ ಭತ್ತದ ಬಣವೆಗೆ ಬೆಂಕಿ ಬಿದ್ದ ಕಾರಣ, ಉರಿಯುವ ವ್ಯಾಪ್ತಿ ಹೆಚ್ಚಾಗಿ ಕಟ್ಟಿಹಾಕಿದ್ದ ಕೋಣಗಳ ಸಹಿತವು ಬೆಂಕಿಗೆ ಆಹುತಿಯಾಗಿವೆ.
ಸ್ಥಳೀಯರ ಪ್ರಕಾರ, ಬೆಂಕಿಯ ತೀವ್ರತೆಯಿಂದಾಗಿ ಥೊನ್ಸೆ ಮತ್ತು ಅಪ್ಪು ಸ್ಥಳದಲ್ಲೇ ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ಕಂಬಳ ಕೋಣಗಳನ್ನು ಸಾಕಲು ಮಾಲೀಕರಾದ ಅಶೋಕ್ ಶೆಟ್ಟಿ ವರ್ಷಗಳಿಂದ ಶ್ರಮಪಟ್ಟು ಬೆಳೆಸಿದ್ದರು. ಈ ಕಣ್ಮಣಿಗಳ ಸಾವಿಗೆ ಹಳ್ಳಿ ಜನತೆಯಲ್ಲಿ ಆಘಾತ ಮತ್ತು ದುಃಖದ ಛಾಯೆ ಹರಡಿದೆ.
“ಥೊನ್ಸೆ ಮತ್ತು ಅಪ್ಪು ಮಾತ್ರ ಕೋಣಗಳು ಅಲ್ಲ. ಅವು ನಮ್ಮ ಕುಟುಂಬದ ಸದಸ್ಯರಂತಾಗಿದ್ದವು. ಇಂತಹದು ಆಗಲಿದೆ ಅಂತ ಕನಸೂ ಕಂಡಿರಲಿಲ್ಲ,” ಎಂದು ದುಃಖಭರಿತ ಕಂಠದಲ್ಲಿ ಮಾಲಿಕ ಅಶೋಕ್ ಶೆಟ್ಟಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು