1:55 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕಾರ್ಕಳ: ಬೆಂಕಿ ಅನಾಹುತ; ಕಂಬಳ ಕೋಣ ಥೊನ್ಸೆ ಮತ್ತು ಅಪ್ಪು ಬಲಿ

31/05/2025, 19:15

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕನಹಲಗೆಯ ಎರಡು ಹೆಸರಾಂತ ಕಂಬಳ ಕೋಣಗಳು – ಥೊನ್ಸೆ ಮತ್ತು ಅಪ್ಪು – ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿಗೆ ಬಲಿಯಾಗಿವೆ.


ಈ ಕೋಣಗಳು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಕಂಬಳಗಳಲ್ಲಿ ಭಾರಿ ಬಹುಮಾನಗಳನ್ನು ಗೆದ್ದಿದ್ದವು.
ಘಟನೆ ರಾತ್ರಿ ಸಂಭವಿಸಿದ್ದು, ಹತ್ತಿರವಿದ್ದ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಅದರ ಬಿಳವಣಿಗೆ ತಡೆಗಟ್ಟಲಾಗಲಿಲ್ಲ. ಹಟ್ಟಿಗೆ ಸೇರ್ಪಡೆಯಾಗಿ ಇದ್ದ ಭತ್ತದ ಬಣವೆಗೆ ಬೆಂಕಿ ಬಿದ್ದ ಕಾರಣ, ಉರಿಯುವ ವ್ಯಾಪ್ತಿ ಹೆಚ್ಚಾಗಿ ಕಟ್ಟಿಹಾಕಿದ್ದ ಕೋಣಗಳ ಸಹಿತವು ಬೆಂಕಿಗೆ ಆಹುತಿಯಾಗಿವೆ.
ಸ್ಥಳೀಯರ ಪ್ರಕಾರ, ಬೆಂಕಿಯ ತೀವ್ರತೆಯಿಂದಾಗಿ ಥೊನ್ಸೆ ಮತ್ತು ಅಪ್ಪು ಸ್ಥಳದಲ್ಲೇ ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ಕಂಬಳ ಕೋಣಗಳನ್ನು ಸಾಕಲು ಮಾಲೀಕರಾದ ಅಶೋಕ್ ಶೆಟ್ಟಿ ವರ್ಷಗಳಿಂದ ಶ್ರಮಪಟ್ಟು ಬೆಳೆಸಿದ್ದರು. ಈ ಕಣ್ಮಣಿಗಳ ಸಾವಿಗೆ ಹಳ್ಳಿ ಜನತೆಯಲ್ಲಿ ಆಘಾತ ಮತ್ತು ದುಃಖದ ಛಾಯೆ ಹರಡಿದೆ.
“ಥೊನ್ಸೆ ಮತ್ತು ಅಪ್ಪು ಮಾತ್ರ ಕೋಣಗಳು ಅಲ್ಲ. ಅವು ನಮ್ಮ ಕುಟುಂಬದ ಸದಸ್ಯರಂತಾಗಿದ್ದವು. ಇಂತಹದು ಆಗಲಿದೆ ಅಂತ ಕನಸೂ ಕಂಡಿರಲಿಲ್ಲ,” ಎಂದು ದುಃಖಭರಿತ ಕಂಠದಲ್ಲಿ ಮಾಲಿಕ ಅಶೋಕ್ ಶೆಟ್ಟಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು