9:15 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕಾರ್ಕಳ: ಬೆಂಕಿ ಅನಾಹುತ; ಕಂಬಳ ಕೋಣ ಥೊನ್ಸೆ ಮತ್ತು ಅಪ್ಪು ಬಲಿ

31/05/2025, 19:15

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕನಹಲಗೆಯ ಎರಡು ಹೆಸರಾಂತ ಕಂಬಳ ಕೋಣಗಳು – ಥೊನ್ಸೆ ಮತ್ತು ಅಪ್ಪು – ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿಗೆ ಬಲಿಯಾಗಿವೆ.


ಈ ಕೋಣಗಳು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಕಂಬಳಗಳಲ್ಲಿ ಭಾರಿ ಬಹುಮಾನಗಳನ್ನು ಗೆದ್ದಿದ್ದವು.
ಘಟನೆ ರಾತ್ರಿ ಸಂಭವಿಸಿದ್ದು, ಹತ್ತಿರವಿದ್ದ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಅದರ ಬಿಳವಣಿಗೆ ತಡೆಗಟ್ಟಲಾಗಲಿಲ್ಲ. ಹಟ್ಟಿಗೆ ಸೇರ್ಪಡೆಯಾಗಿ ಇದ್ದ ಭತ್ತದ ಬಣವೆಗೆ ಬೆಂಕಿ ಬಿದ್ದ ಕಾರಣ, ಉರಿಯುವ ವ್ಯಾಪ್ತಿ ಹೆಚ್ಚಾಗಿ ಕಟ್ಟಿಹಾಕಿದ್ದ ಕೋಣಗಳ ಸಹಿತವು ಬೆಂಕಿಗೆ ಆಹುತಿಯಾಗಿವೆ.
ಸ್ಥಳೀಯರ ಪ್ರಕಾರ, ಬೆಂಕಿಯ ತೀವ್ರತೆಯಿಂದಾಗಿ ಥೊನ್ಸೆ ಮತ್ತು ಅಪ್ಪು ಸ್ಥಳದಲ್ಲೇ ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ಕಂಬಳ ಕೋಣಗಳನ್ನು ಸಾಕಲು ಮಾಲೀಕರಾದ ಅಶೋಕ್ ಶೆಟ್ಟಿ ವರ್ಷಗಳಿಂದ ಶ್ರಮಪಟ್ಟು ಬೆಳೆಸಿದ್ದರು. ಈ ಕಣ್ಮಣಿಗಳ ಸಾವಿಗೆ ಹಳ್ಳಿ ಜನತೆಯಲ್ಲಿ ಆಘಾತ ಮತ್ತು ದುಃಖದ ಛಾಯೆ ಹರಡಿದೆ.
“ಥೊನ್ಸೆ ಮತ್ತು ಅಪ್ಪು ಮಾತ್ರ ಕೋಣಗಳು ಅಲ್ಲ. ಅವು ನಮ್ಮ ಕುಟುಂಬದ ಸದಸ್ಯರಂತಾಗಿದ್ದವು. ಇಂತಹದು ಆಗಲಿದೆ ಅಂತ ಕನಸೂ ಕಂಡಿರಲಿಲ್ಲ,” ಎಂದು ದುಃಖಭರಿತ ಕಂಠದಲ್ಲಿ ಮಾಲಿಕ ಅಶೋಕ್ ಶೆಟ್ಟಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು