8:37 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿಯ ಅತ್ಯಾಚಾರ ಹಾಗೂ ಡ್ರಗ್ಸ್ ಪ್ರಕರಣ: ಬಂಧಿತ ಆರೋಪಿಗಳ ಸಂಖ್ಯೆ 5ಕ್ಕೇರಿಕೆ

30/08/2024, 10:31

ಕಾರ್ಕಳ(reporterkarnataka.com): ಯುವತಿಯ ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣ ಸಂಬಂಧಿಸಿದಂತೆ ಕಾರ್ಕಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 5ಕ್ಕೇರಿದೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಹಾಗೂ ಕಾಪು ಶಂಕರಪುರದ ಜಾನ್ ನೊರೊನ್ಹಾ (30 ) ಮತ್ತಿಬ್ಬರು ಬಂಧಿತ ಆರೋಪಿಗಳು.
ಅತ್ಯಾಚಾರ ಆರೋಪಿ  ಬಂಗ್ಲೆಗುಡ್ಡೆಯ ಅಲ್ತಾಫ್ (34) ಮದ್ಯ ಪೂರೈಕೆ ಮಾಡಿದ  ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್(35), ಡ್ರಗ್ ಪೂರೈಕೆ ಮಾಡಿದ ಕಾರ್ಕಳ ಕೋರ್ಟ್ ರಸ್ತೆಯ  ಆರೋಪಿ ಅಭಯ್ (23) ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಇದೀಗ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, 4 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮದ್ಯ ಪೂರೈಕೆ ಮಾಡಿದ ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್ ಅವನನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಕಾರ್ಕಳದ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಸಂತ್ರಸ್ತ ಯುವತಿಯನ್ನು ಕಾರ್ಕಳ ಪೊಲೀಸರು ಹಾಜರು ಪಡಿಸಿದ್ದರು. ಸಿಆರ್ ಪಿಸಿ 164 ನಿಯಮದಂತೆ ಸಂತ್ರಸ್ತೆ ಹೇಳಿಕೆ ದಾಖಲಾಗಿದೆ.  ತನಿಖಾಧಿಕಾರಿ ಮಂಜಪ್ಪ ನೇತೃತ್ವದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕಳೆದ ಶುಕ್ರವಾರ ಕಾರ್ಕಳ ಕುಕ್ಕುಂದೂರು ಗ್ರಾಮದ ಯುವತಿ ಯ ಮೇಲೆ  ಮಾದಕ ವಸ್ತು ನೀಡಿ ಅತ್ಯಾಚಾರ   ಗೈಯ್ಯಲಾಗಿತ್ತು.
ಕಾರ್ಕಳ ನಗರ ಠಾಣೆಯಲ್ಲಿ ಅ ಕ್ರ146/2024 ಕಲಂ  8(C), 22(b) NDPS ಹಾಗೂ  ಕಲಂ 111, 3(5)
ಬಿ.ಎನ್‌.ಎಸ್‌-2023ರಂತೆ ಪ್ರಕರಣ ದಾಖಲಾಗಿತ್ತು.
*ಆಂಧ್ರದ ಲಿಂಕ್ :* ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ರಸ್ತೆಯ ಅಭಯ್ ಗೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಕಾಪು ಶಂಕರಪುರದ ಜಾನ್ ನೊರೊನ್ಹಾ  (30 )  ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು