8:13 AM Thursday19 - February 2026
ಬ್ರೇಕಿಂಗ್ ನ್ಯೂಸ್
ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿಯ ಅತ್ಯಾಚಾರ ಹಾಗೂ ಡ್ರಗ್ಸ್ ಪ್ರಕರಣ: ಬಂಧಿತ ಆರೋಪಿಗಳ ಸಂಖ್ಯೆ 5ಕ್ಕೇರಿಕೆ

30/08/2024, 10:31

ಕಾರ್ಕಳ(reporterkarnataka.com): ಯುವತಿಯ ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣ ಸಂಬಂಧಿಸಿದಂತೆ ಕಾರ್ಕಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 5ಕ್ಕೇರಿದೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಹಾಗೂ ಕಾಪು ಶಂಕರಪುರದ ಜಾನ್ ನೊರೊನ್ಹಾ (30 ) ಮತ್ತಿಬ್ಬರು ಬಂಧಿತ ಆರೋಪಿಗಳು.
ಅತ್ಯಾಚಾರ ಆರೋಪಿ  ಬಂಗ್ಲೆಗುಡ್ಡೆಯ ಅಲ್ತಾಫ್ (34) ಮದ್ಯ ಪೂರೈಕೆ ಮಾಡಿದ  ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್(35), ಡ್ರಗ್ ಪೂರೈಕೆ ಮಾಡಿದ ಕಾರ್ಕಳ ಕೋರ್ಟ್ ರಸ್ತೆಯ  ಆರೋಪಿ ಅಭಯ್ (23) ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಇದೀಗ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, 4 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮದ್ಯ ಪೂರೈಕೆ ಮಾಡಿದ ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್ ಅವನನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಕಾರ್ಕಳದ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಸಂತ್ರಸ್ತ ಯುವತಿಯನ್ನು ಕಾರ್ಕಳ ಪೊಲೀಸರು ಹಾಜರು ಪಡಿಸಿದ್ದರು. ಸಿಆರ್ ಪಿಸಿ 164 ನಿಯಮದಂತೆ ಸಂತ್ರಸ್ತೆ ಹೇಳಿಕೆ ದಾಖಲಾಗಿದೆ.  ತನಿಖಾಧಿಕಾರಿ ಮಂಜಪ್ಪ ನೇತೃತ್ವದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕಳೆದ ಶುಕ್ರವಾರ ಕಾರ್ಕಳ ಕುಕ್ಕುಂದೂರು ಗ್ರಾಮದ ಯುವತಿ ಯ ಮೇಲೆ  ಮಾದಕ ವಸ್ತು ನೀಡಿ ಅತ್ಯಾಚಾರ   ಗೈಯ್ಯಲಾಗಿತ್ತು.
ಕಾರ್ಕಳ ನಗರ ಠಾಣೆಯಲ್ಲಿ ಅ ಕ್ರ146/2024 ಕಲಂ  8(C), 22(b) NDPS ಹಾಗೂ  ಕಲಂ 111, 3(5)
ಬಿ.ಎನ್‌.ಎಸ್‌-2023ರಂತೆ ಪ್ರಕರಣ ದಾಖಲಾಗಿತ್ತು.
*ಆಂಧ್ರದ ಲಿಂಕ್ :* ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ರಸ್ತೆಯ ಅಭಯ್ ಗೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಕಾಪು ಶಂಕರಪುರದ ಜಾನ್ ನೊರೊನ್ಹಾ  (30 )  ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು