7:16 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿಯ ಅತ್ಯಾಚಾರ ಹಾಗೂ ಡ್ರಗ್ಸ್ ಪ್ರಕರಣ: ಬಂಧಿತ ಆರೋಪಿಗಳ ಸಂಖ್ಯೆ 5ಕ್ಕೇರಿಕೆ

30/08/2024, 10:31

ಕಾರ್ಕಳ(reporterkarnataka.com): ಯುವತಿಯ ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣ ಸಂಬಂಧಿಸಿದಂತೆ ಕಾರ್ಕಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 5ಕ್ಕೇರಿದೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಹಾಗೂ ಕಾಪು ಶಂಕರಪುರದ ಜಾನ್ ನೊರೊನ್ಹಾ (30 ) ಮತ್ತಿಬ್ಬರು ಬಂಧಿತ ಆರೋಪಿಗಳು.
ಅತ್ಯಾಚಾರ ಆರೋಪಿ  ಬಂಗ್ಲೆಗುಡ್ಡೆಯ ಅಲ್ತಾಫ್ (34) ಮದ್ಯ ಪೂರೈಕೆ ಮಾಡಿದ  ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್(35), ಡ್ರಗ್ ಪೂರೈಕೆ ಮಾಡಿದ ಕಾರ್ಕಳ ಕೋರ್ಟ್ ರಸ್ತೆಯ  ಆರೋಪಿ ಅಭಯ್ (23) ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಇದೀಗ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, 4 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮದ್ಯ ಪೂರೈಕೆ ಮಾಡಿದ ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್ ಅವನನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಕಾರ್ಕಳದ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಸಂತ್ರಸ್ತ ಯುವತಿಯನ್ನು ಕಾರ್ಕಳ ಪೊಲೀಸರು ಹಾಜರು ಪಡಿಸಿದ್ದರು. ಸಿಆರ್ ಪಿಸಿ 164 ನಿಯಮದಂತೆ ಸಂತ್ರಸ್ತೆ ಹೇಳಿಕೆ ದಾಖಲಾಗಿದೆ.  ತನಿಖಾಧಿಕಾರಿ ಮಂಜಪ್ಪ ನೇತೃತ್ವದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕಳೆದ ಶುಕ್ರವಾರ ಕಾರ್ಕಳ ಕುಕ್ಕುಂದೂರು ಗ್ರಾಮದ ಯುವತಿ ಯ ಮೇಲೆ  ಮಾದಕ ವಸ್ತು ನೀಡಿ ಅತ್ಯಾಚಾರ   ಗೈಯ್ಯಲಾಗಿತ್ತು.
ಕಾರ್ಕಳ ನಗರ ಠಾಣೆಯಲ್ಲಿ ಅ ಕ್ರ146/2024 ಕಲಂ  8(C), 22(b) NDPS ಹಾಗೂ  ಕಲಂ 111, 3(5)
ಬಿ.ಎನ್‌.ಎಸ್‌-2023ರಂತೆ ಪ್ರಕರಣ ದಾಖಲಾಗಿತ್ತು.
*ಆಂಧ್ರದ ಲಿಂಕ್ :* ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ರಸ್ತೆಯ ಅಭಯ್ ಗೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಕಾಪು ಶಂಕರಪುರದ ಜಾನ್ ನೊರೊನ್ಹಾ  (30 )  ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು