6:08 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿಯ ಅತ್ಯಾಚಾರ ಹಾಗೂ ಡ್ರಗ್ಸ್ ಪ್ರಕರಣ: ಬಂಧಿತ ಆರೋಪಿಗಳ ಸಂಖ್ಯೆ 5ಕ್ಕೇರಿಕೆ

30/08/2024, 10:31

ಕಾರ್ಕಳ(reporterkarnataka.com): ಯುವತಿಯ ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣ ಸಂಬಂಧಿಸಿದಂತೆ ಕಾರ್ಕಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 5ಕ್ಕೇರಿದೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಹಾಗೂ ಕಾಪು ಶಂಕರಪುರದ ಜಾನ್ ನೊರೊನ್ಹಾ (30 ) ಮತ್ತಿಬ್ಬರು ಬಂಧಿತ ಆರೋಪಿಗಳು.
ಅತ್ಯಾಚಾರ ಆರೋಪಿ  ಬಂಗ್ಲೆಗುಡ್ಡೆಯ ಅಲ್ತಾಫ್ (34) ಮದ್ಯ ಪೂರೈಕೆ ಮಾಡಿದ  ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್(35), ಡ್ರಗ್ ಪೂರೈಕೆ ಮಾಡಿದ ಕಾರ್ಕಳ ಕೋರ್ಟ್ ರಸ್ತೆಯ  ಆರೋಪಿ ಅಭಯ್ (23) ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಇದೀಗ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, 4 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮದ್ಯ ಪೂರೈಕೆ ಮಾಡಿದ ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್ ಅವನನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಕಾರ್ಕಳದ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಸಂತ್ರಸ್ತ ಯುವತಿಯನ್ನು ಕಾರ್ಕಳ ಪೊಲೀಸರು ಹಾಜರು ಪಡಿಸಿದ್ದರು. ಸಿಆರ್ ಪಿಸಿ 164 ನಿಯಮದಂತೆ ಸಂತ್ರಸ್ತೆ ಹೇಳಿಕೆ ದಾಖಲಾಗಿದೆ.  ತನಿಖಾಧಿಕಾರಿ ಮಂಜಪ್ಪ ನೇತೃತ್ವದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕಳೆದ ಶುಕ್ರವಾರ ಕಾರ್ಕಳ ಕುಕ್ಕುಂದೂರು ಗ್ರಾಮದ ಯುವತಿ ಯ ಮೇಲೆ  ಮಾದಕ ವಸ್ತು ನೀಡಿ ಅತ್ಯಾಚಾರ   ಗೈಯ್ಯಲಾಗಿತ್ತು.
ಕಾರ್ಕಳ ನಗರ ಠಾಣೆಯಲ್ಲಿ ಅ ಕ್ರ146/2024 ಕಲಂ  8(C), 22(b) NDPS ಹಾಗೂ  ಕಲಂ 111, 3(5)
ಬಿ.ಎನ್‌.ಎಸ್‌-2023ರಂತೆ ಪ್ರಕರಣ ದಾಖಲಾಗಿತ್ತು.
*ಆಂಧ್ರದ ಲಿಂಕ್ :* ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ರಸ್ತೆಯ ಅಭಯ್ ಗೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಕಾಪು ಶಂಕರಪುರದ ಜಾನ್ ನೊರೊನ್ಹಾ  (30 )  ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು