4:01 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಾರ್ಕಳ: ಜಲಜೀವನ್ ಮಿಷನ್ ನಡಿ ಕುಡಿಯುವ ನೀರು;  53.32 ಕೋಟಿ ರೂ.ಗಳ ಯೋಜನೆ ತಯಾರಿ

06/10/2021, 17:56

ಕಾರ್ಕಳ(reporterkarnataka.com):
ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದ ಜನವಸತಿ ಪ್ರದೇಶದ ಕುಟುಂಬಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ್ಳಿ ನೀರಿನ ಸಂಪರ್ಕ ಒದಗಿಸಿ ಪ್ರತಿ ಸದಸ್ಯನಿಗೆ ದಿನಕ್ಕೆ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಹೊಂದಲಾಗಿದ್ದು, ಒಟ್ಟು 53.32 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ.

ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಯೋಜನೆಯಡಿ ಒಟ್ಟು 34 ಗ್ರಾಮ ಪಂಚಾಯತ್‌ಗಳ 504 ಜನವಸತಿ ಪ್ರದೇಶಗಳಿಗೆ ನೀರಿನ ಸಂಪರ್ಕ ಒದಗಿಸಲು ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲು ಅಂದಾಜು ಮೊತ್ತ ರೂ. 53.32 ಕೋಟಿಗಳಿಗೆ ಯೋಜನೆ ರೂಪಿಸಲಾಗಿದೆ. ಕಾಮಗಾರಿಗಳಲ್ಲಿ ಒಟ್ಟು 133 ಕೊಳವಿ ಬಾವಿಗಳು 92 ಮೇಲ್ಮಟ್ಟದ ಟ್ಯಾಂಕ್ ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. 

198 ಕಾಮಗಾರಿಗಳ ಪೈಕಿ 14 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 137 ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುತ್ತವೆ ಹಾಗೂ 64 ಮೇಲ್ಮಟ್ಟದ ಟ್ಯಾಂಕ್ ಗಳು ಪ್ರಗತಿಯಲ್ಲಿರುತ್ತದೆ. ಬಾಕಿ ಉಳಿದ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯ ಹಂತದಲ್ಲಿರುತ್ತದೆ. 

ಇತ್ತೀಚಿನ ದಿನಗಳಲ್ಲಿ ಕೊಳವೆ ಬಾವಿಗಳಲ್ಲಿನ ನೀರಿನ ಲಭ್ಯತೆಯು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ವಾರಾಹಿ ನದಿಯ ಶಾಶ್ವತ ಜಲ ಮೂಲದಿಂದ ನೀರನ್ನು ಪಡೆದು ಕಾರ್ಕಳ ಕ್ಷೇತ್ರದ ಉಭಯ ತಾಲೂಕಿನ ಎಲ್ಲ ಜನವಸತಿಗಳಲ್ಲಿರುವ ಪ್ರತಿಯೊಬ್ಬರಿಗೂ ದಿನಕ್ಕೆ ತಲಾ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಮುಂದಿನ 30 ವರ್ಷಗಳವರೆಗೆ ಸರಬರಾಜು ಮಾಡಲು ಅಂದಾಜು ರೂ.600.00 ಕೋಟಿಗೂ ಅಧಿಕ ಮೊತ್ತದ  ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ರೂಪಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು