9:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಾರ್ಕಳ: ಜಲಜೀವನ್ ಮಿಷನ್ ನಡಿ ಕುಡಿಯುವ ನೀರು;  53.32 ಕೋಟಿ ರೂ.ಗಳ ಯೋಜನೆ ತಯಾರಿ

06/10/2021, 17:56

ಕಾರ್ಕಳ(reporterkarnataka.com):
ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದ ಜನವಸತಿ ಪ್ರದೇಶದ ಕುಟುಂಬಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ್ಳಿ ನೀರಿನ ಸಂಪರ್ಕ ಒದಗಿಸಿ ಪ್ರತಿ ಸದಸ್ಯನಿಗೆ ದಿನಕ್ಕೆ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಹೊಂದಲಾಗಿದ್ದು, ಒಟ್ಟು 53.32 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ.

ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಯೋಜನೆಯಡಿ ಒಟ್ಟು 34 ಗ್ರಾಮ ಪಂಚಾಯತ್‌ಗಳ 504 ಜನವಸತಿ ಪ್ರದೇಶಗಳಿಗೆ ನೀರಿನ ಸಂಪರ್ಕ ಒದಗಿಸಲು ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲು ಅಂದಾಜು ಮೊತ್ತ ರೂ. 53.32 ಕೋಟಿಗಳಿಗೆ ಯೋಜನೆ ರೂಪಿಸಲಾಗಿದೆ. ಕಾಮಗಾರಿಗಳಲ್ಲಿ ಒಟ್ಟು 133 ಕೊಳವಿ ಬಾವಿಗಳು 92 ಮೇಲ್ಮಟ್ಟದ ಟ್ಯಾಂಕ್ ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. 

198 ಕಾಮಗಾರಿಗಳ ಪೈಕಿ 14 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 137 ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುತ್ತವೆ ಹಾಗೂ 64 ಮೇಲ್ಮಟ್ಟದ ಟ್ಯಾಂಕ್ ಗಳು ಪ್ರಗತಿಯಲ್ಲಿರುತ್ತದೆ. ಬಾಕಿ ಉಳಿದ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯ ಹಂತದಲ್ಲಿರುತ್ತದೆ. 

ಇತ್ತೀಚಿನ ದಿನಗಳಲ್ಲಿ ಕೊಳವೆ ಬಾವಿಗಳಲ್ಲಿನ ನೀರಿನ ಲಭ್ಯತೆಯು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ವಾರಾಹಿ ನದಿಯ ಶಾಶ್ವತ ಜಲ ಮೂಲದಿಂದ ನೀರನ್ನು ಪಡೆದು ಕಾರ್ಕಳ ಕ್ಷೇತ್ರದ ಉಭಯ ತಾಲೂಕಿನ ಎಲ್ಲ ಜನವಸತಿಗಳಲ್ಲಿರುವ ಪ್ರತಿಯೊಬ್ಬರಿಗೂ ದಿನಕ್ಕೆ ತಲಾ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಮುಂದಿನ 30 ವರ್ಷಗಳವರೆಗೆ ಸರಬರಾಜು ಮಾಡಲು ಅಂದಾಜು ರೂ.600.00 ಕೋಟಿಗೂ ಅಧಿಕ ಮೊತ್ತದ  ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ರೂಪಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು