2:11 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕಾರ್ಕಳ ಕೋಟೆಕಣಿಯಲ್ಲಿ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆ!: ಕಳೆದಿ ಆಳ್ವಿಕೆ ಕಾಲದ್ದು ಶಂಕೆ

03/12/2022, 23:29

ಕಾರ್ಕಳ(reporterkarnataka.com): ಐತಿಹಾಸಿಕ ಹಿನ್ನಲೆಯುಳ್ಳ ಕಾರ್ಕಳ ಸರಕಾರಿ ಆಸ್ಪತ್ರೆ ಬಳಿಯ ಕೋಟೆಕಣಿ ಪರಿಸರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಹಿಟಾಚಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆಯಾಗಿವೆ. ಉದ್ಯಮಿಯೊಬ್ಬರು ಖರೀದಿಸಿದ್ದ ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಯನ್ನು ಅಗೆಯುತ್ತಿದ್ದಾಗ ಸುಮಾರು 15 ಅಡಿ ಆಳದಲ್ಲಿ ವೃತ್ತಾಕಾರದ ನೂರಾರು ಕಲ್ಲು ಗುಂಡುಗಳು ಪತ್ತೆಯಾಗಿವೆ.
ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ ಎಸ್ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉತ್ಖನನದಿಂದ ಸಿಕ್ಕಿರುವ ಕಲ್ಲು ಗುಂಡುಗಳನ್ನು ಪುರಾತತ್ವ ಇಲಾಖೆಗೆ ಒಪ್ಪಿಸಲಾಗಿದೆ.

ಇತಿಹಾಸಕಾರರ ಪ್ರಕಾರ ಕಳೆದಿಯ ಶಿವಪ್ಪ ನಾಯಕನ ಆಳ್ವಿಕೆಯಲ್ಲಿ ಇಲ್ಲಿ ಕೋಟೆ ನಿರ್ಮಿಸಲಾಗಿತ್ತು. ಬಳಿಕ ಟಿಪ್ಪು ಶಿವಪ್ಪ ನಾಯಕನ ಕೋಟೆಗೆ ದಾಳಿ ನಡೆಸಿದ್ದ ಎನ್ನುವುದು ಇತಿಹಾಸಕಾರರ ಅಭಿಪ್ರಾಯವಾಗಿದೆ. ವೈರಿಗಳ ವಿರುದ್ಧ ಫಿರಂಗಿ ದಾಳಿಗೆ ಈ ಕಲ್ಲು ಗುಂಡುಗಳನ್ನು ಬಳಸಿಕೊಂಡಿರುವ ಸಾಧ್ಯತೆಯಿದೆ ಎಂಬುವುದಾಗಿ ಇತಿಹಾಸಕಾರರು ಉಲ್ಲೇಖಿಸಿದ್ದಾರೆ. ವೈರಿಗಳಿಂದ ರಕ್ಷಿಸಿಕೊಳ್ಳಲು ಕೋಟೆಯ ಸುತ್ತಲೂ ಕಂದಕ ನಿರ್ಮಿಸಿದ್ದರಿಂದ ಈ ಸ್ಥಳಕ್ಕೆ ಕೋಟೆಕಣಿ ಎಂದೇ ಹೆಸರು ಬಂದಿತ್ತು ಅಲ್ಲದೇ ಇದೇ ಹೆಸರು ಇಂದಿಗೂ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು