10:48 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಕಾರ್ಕಳ ಕೋಟೆಕಣಿಯಲ್ಲಿ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆ!: ಕಳೆದಿ ಆಳ್ವಿಕೆ ಕಾಲದ್ದು ಶಂಕೆ

03/12/2022, 23:29

ಕಾರ್ಕಳ(reporterkarnataka.com): ಐತಿಹಾಸಿಕ ಹಿನ್ನಲೆಯುಳ್ಳ ಕಾರ್ಕಳ ಸರಕಾರಿ ಆಸ್ಪತ್ರೆ ಬಳಿಯ ಕೋಟೆಕಣಿ ಪರಿಸರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಹಿಟಾಚಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆಯಾಗಿವೆ. ಉದ್ಯಮಿಯೊಬ್ಬರು ಖರೀದಿಸಿದ್ದ ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಯನ್ನು ಅಗೆಯುತ್ತಿದ್ದಾಗ ಸುಮಾರು 15 ಅಡಿ ಆಳದಲ್ಲಿ ವೃತ್ತಾಕಾರದ ನೂರಾರು ಕಲ್ಲು ಗುಂಡುಗಳು ಪತ್ತೆಯಾಗಿವೆ.
ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ ಎಸ್ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉತ್ಖನನದಿಂದ ಸಿಕ್ಕಿರುವ ಕಲ್ಲು ಗುಂಡುಗಳನ್ನು ಪುರಾತತ್ವ ಇಲಾಖೆಗೆ ಒಪ್ಪಿಸಲಾಗಿದೆ.

ಇತಿಹಾಸಕಾರರ ಪ್ರಕಾರ ಕಳೆದಿಯ ಶಿವಪ್ಪ ನಾಯಕನ ಆಳ್ವಿಕೆಯಲ್ಲಿ ಇಲ್ಲಿ ಕೋಟೆ ನಿರ್ಮಿಸಲಾಗಿತ್ತು. ಬಳಿಕ ಟಿಪ್ಪು ಶಿವಪ್ಪ ನಾಯಕನ ಕೋಟೆಗೆ ದಾಳಿ ನಡೆಸಿದ್ದ ಎನ್ನುವುದು ಇತಿಹಾಸಕಾರರ ಅಭಿಪ್ರಾಯವಾಗಿದೆ. ವೈರಿಗಳ ವಿರುದ್ಧ ಫಿರಂಗಿ ದಾಳಿಗೆ ಈ ಕಲ್ಲು ಗುಂಡುಗಳನ್ನು ಬಳಸಿಕೊಂಡಿರುವ ಸಾಧ್ಯತೆಯಿದೆ ಎಂಬುವುದಾಗಿ ಇತಿಹಾಸಕಾರರು ಉಲ್ಲೇಖಿಸಿದ್ದಾರೆ. ವೈರಿಗಳಿಂದ ರಕ್ಷಿಸಿಕೊಳ್ಳಲು ಕೋಟೆಯ ಸುತ್ತಲೂ ಕಂದಕ ನಿರ್ಮಿಸಿದ್ದರಿಂದ ಈ ಸ್ಥಳಕ್ಕೆ ಕೋಟೆಕಣಿ ಎಂದೇ ಹೆಸರು ಬಂದಿತ್ತು ಅಲ್ಲದೇ ಇದೇ ಹೆಸರು ಇಂದಿಗೂ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು