1:58 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕಾರ್ಕಳ ಕೋಟೆಕಣಿಯಲ್ಲಿ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆ!: ಕಳೆದಿ ಆಳ್ವಿಕೆ ಕಾಲದ್ದು ಶಂಕೆ

03/12/2022, 23:29

ಕಾರ್ಕಳ(reporterkarnataka.com): ಐತಿಹಾಸಿಕ ಹಿನ್ನಲೆಯುಳ್ಳ ಕಾರ್ಕಳ ಸರಕಾರಿ ಆಸ್ಪತ್ರೆ ಬಳಿಯ ಕೋಟೆಕಣಿ ಪರಿಸರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಹಿಟಾಚಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆಯಾಗಿವೆ. ಉದ್ಯಮಿಯೊಬ್ಬರು ಖರೀದಿಸಿದ್ದ ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಯನ್ನು ಅಗೆಯುತ್ತಿದ್ದಾಗ ಸುಮಾರು 15 ಅಡಿ ಆಳದಲ್ಲಿ ವೃತ್ತಾಕಾರದ ನೂರಾರು ಕಲ್ಲು ಗುಂಡುಗಳು ಪತ್ತೆಯಾಗಿವೆ.
ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ ಎಸ್ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉತ್ಖನನದಿಂದ ಸಿಕ್ಕಿರುವ ಕಲ್ಲು ಗುಂಡುಗಳನ್ನು ಪುರಾತತ್ವ ಇಲಾಖೆಗೆ ಒಪ್ಪಿಸಲಾಗಿದೆ.

ಇತಿಹಾಸಕಾರರ ಪ್ರಕಾರ ಕಳೆದಿಯ ಶಿವಪ್ಪ ನಾಯಕನ ಆಳ್ವಿಕೆಯಲ್ಲಿ ಇಲ್ಲಿ ಕೋಟೆ ನಿರ್ಮಿಸಲಾಗಿತ್ತು. ಬಳಿಕ ಟಿಪ್ಪು ಶಿವಪ್ಪ ನಾಯಕನ ಕೋಟೆಗೆ ದಾಳಿ ನಡೆಸಿದ್ದ ಎನ್ನುವುದು ಇತಿಹಾಸಕಾರರ ಅಭಿಪ್ರಾಯವಾಗಿದೆ. ವೈರಿಗಳ ವಿರುದ್ಧ ಫಿರಂಗಿ ದಾಳಿಗೆ ಈ ಕಲ್ಲು ಗುಂಡುಗಳನ್ನು ಬಳಸಿಕೊಂಡಿರುವ ಸಾಧ್ಯತೆಯಿದೆ ಎಂಬುವುದಾಗಿ ಇತಿಹಾಸಕಾರರು ಉಲ್ಲೇಖಿಸಿದ್ದಾರೆ. ವೈರಿಗಳಿಂದ ರಕ್ಷಿಸಿಕೊಳ್ಳಲು ಕೋಟೆಯ ಸುತ್ತಲೂ ಕಂದಕ ನಿರ್ಮಿಸಿದ್ದರಿಂದ ಈ ಸ್ಥಳಕ್ಕೆ ಕೋಟೆಕಣಿ ಎಂದೇ ಹೆಸರು ಬಂದಿತ್ತು ಅಲ್ಲದೇ ಇದೇ ಹೆಸರು ಇಂದಿಗೂ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು