6:16 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾರ್ಕಳ ಕೋಟೆಕಣಿಯಲ್ಲಿ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆ!: ಕಳೆದಿ ಆಳ್ವಿಕೆ ಕಾಲದ್ದು ಶಂಕೆ

03/12/2022, 23:29

ಕಾರ್ಕಳ(reporterkarnataka.com): ಐತಿಹಾಸಿಕ ಹಿನ್ನಲೆಯುಳ್ಳ ಕಾರ್ಕಳ ಸರಕಾರಿ ಆಸ್ಪತ್ರೆ ಬಳಿಯ ಕೋಟೆಕಣಿ ಪರಿಸರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಹಿಟಾಚಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆಯಾಗಿವೆ. ಉದ್ಯಮಿಯೊಬ್ಬರು ಖರೀದಿಸಿದ್ದ ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಯನ್ನು ಅಗೆಯುತ್ತಿದ್ದಾಗ ಸುಮಾರು 15 ಅಡಿ ಆಳದಲ್ಲಿ ವೃತ್ತಾಕಾರದ ನೂರಾರು ಕಲ್ಲು ಗುಂಡುಗಳು ಪತ್ತೆಯಾಗಿವೆ.
ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ ಎಸ್ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉತ್ಖನನದಿಂದ ಸಿಕ್ಕಿರುವ ಕಲ್ಲು ಗುಂಡುಗಳನ್ನು ಪುರಾತತ್ವ ಇಲಾಖೆಗೆ ಒಪ್ಪಿಸಲಾಗಿದೆ.

ಇತಿಹಾಸಕಾರರ ಪ್ರಕಾರ ಕಳೆದಿಯ ಶಿವಪ್ಪ ನಾಯಕನ ಆಳ್ವಿಕೆಯಲ್ಲಿ ಇಲ್ಲಿ ಕೋಟೆ ನಿರ್ಮಿಸಲಾಗಿತ್ತು. ಬಳಿಕ ಟಿಪ್ಪು ಶಿವಪ್ಪ ನಾಯಕನ ಕೋಟೆಗೆ ದಾಳಿ ನಡೆಸಿದ್ದ ಎನ್ನುವುದು ಇತಿಹಾಸಕಾರರ ಅಭಿಪ್ರಾಯವಾಗಿದೆ. ವೈರಿಗಳ ವಿರುದ್ಧ ಫಿರಂಗಿ ದಾಳಿಗೆ ಈ ಕಲ್ಲು ಗುಂಡುಗಳನ್ನು ಬಳಸಿಕೊಂಡಿರುವ ಸಾಧ್ಯತೆಯಿದೆ ಎಂಬುವುದಾಗಿ ಇತಿಹಾಸಕಾರರು ಉಲ್ಲೇಖಿಸಿದ್ದಾರೆ. ವೈರಿಗಳಿಂದ ರಕ್ಷಿಸಿಕೊಳ್ಳಲು ಕೋಟೆಯ ಸುತ್ತಲೂ ಕಂದಕ ನಿರ್ಮಿಸಿದ್ದರಿಂದ ಈ ಸ್ಥಳಕ್ಕೆ ಕೋಟೆಕಣಿ ಎಂದೇ ಹೆಸರು ಬಂದಿತ್ತು ಅಲ್ಲದೇ ಇದೇ ಹೆಸರು ಇಂದಿಗೂ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು