12:17 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾರ್ಕಳ ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣ?: ರಸ್ತೆ ಮಾರ್ಜಿನ್ ನಲ್ಲೇ ಅಂಗಡಿ‌ ಕೋಣೆ?: ಕ್ರಮಕ್ಕೆ ತಹಶೀಲ್ದಾರರಿಗೆ ಮನವಿ

21/06/2023, 19:36

ಕಾರ್ಕಳ(reporterkarnataka.com): ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು, ಸೂಕ್ತ ಕ್ರಮ ಜರುಗಿಸುವಂತೆ ಕಾರ್ಕಳ ತಹಶಿಲ್ದಾರರಿಗೆ ಪುರಸಭಾ ಸದಸ್ಯರು ಮನವಿ ಸಲ್ಲಿಸಿದರು.

2020 ರಲ್ಲಿ ನಡೆದ ಪುರಸಭೆಯ ಮಾಸಿಕ ಸಭೆಯ ನಿರ್ಣಯದಲ್ಲಿ ಜೈನ್ ಹೋಟೆಲ್ ಮುಂಬಾಗದಲ್ಲಿ ನಂದಿನ ಹಾಲಿನ ಡೈರಿ ನಿರ್ಮಾಣಕ್ಕೆ ಸ್ಥಳೀಯ ಪುರಸಭಾ ಸದಸ್ಯರ ವಿರೋಧದ ನಡುವೆಯೂ ಒಪ್ಪಿಗೆ ನೀಡಲಾಗಿದ್ದು ಆದರೆ ಈಗ ಅದನ್ನು ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿರುವ ಮಕ್ಕಳ ಪಾರ್ಕ್ ಬಳಿ ನಿರ್ಮಾಣ ‌ಮಾಡುತ್ತಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಮಾರ್ಜಿನ ವ್ಯಾಪ್ತಿಯ ಒಳಗೆ ಬರುತ್ತಿದ್ದು ಇದಕ್ಕೆ ಲೋಕೋಪಯೋಗಿ ಇಲಾಖೆಯ ನಿರಾಕ್ಷೇಪಣ ಪತ್ರದ ಅಗತ್ಯವಿದೆ. ಆದರೆ ಇದಾವುದು ಇಲ್ಲದೆ ಕಟ್ಡದ ನಿರ್ಮಾಣವಾಗುತ್ತಿದ್ದು ಸೂಕ್ತ ಕ್ರಮ ಜರುಗಿಸುವಂತೆ ಸ್ಥಳೀಯ ಪುರಸಭಾ ಸದಸ್ಯರಾದ ಪ್ರಭಾ ಕಿಶೋರ್ ಮನವಿ ಸಲ್ಲಿಸಿದರು. ಈ ಸಂಬಂಧದಲ್ಲಿ ಪುರಸಭಾ ಸದಸ್ಯರಾದ ಶುಭದ ರಾವ್, ಸೀತಾರಾಮ್, ಪ್ರತಿಮಾ, ವಿನ್ನಿ‌ಬೋಲ್ಡ್ ಮೆಂಡೋನ್ಸಾ, ಅಜಿತ್ ಹೆಗ್ಡೆ ಮಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು