5:23 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕಾರ್ಕಳ: ನಾಡಿಗೆ ಬಂದ ಕಾಡುಕೋಣ ನೇರ ಮನೆಯಂಗಳ ಸೇರಿತು!; ನಾಡ ಮಂದಿಗೆ ಮಾತ್ರ ಭಾರಿ ಆತಂಕ

29/03/2022, 21:31

ಕಾರ್ಕಳ(reporterkarnataka.com): ಇಲ್ಲಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ನಡೆದಿದೆ. 

ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು.

ಆದರೆ ಕಾಡುಕೋಣವು ಗ್ರಾಮದ ಏಕೈಕ ಸಂರ್ಪಕ ರಸ್ತೆಯಲ್ಲಿ ಅಡ್ಡವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದು, ಇದರಿಂದ ಗ್ರಾಮಸ್ಥರ ಒಡಾಟಕ್ಕೆ ಅಡಚಣೆಯಾಯಿತು. ಆ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಕೋಣವನ್ನು ಕಾಡಿಗೆ ಅಟ್ಟಿದರು. 

ಈ ಭಾಗದಲ್ಲಿ ಆಗಾಗ್ಗೆ ಕಾಡುಕೋಣ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನರು ಭೀತಿಗೊಂಡಿದ್ದಾರೆ. 

ಕೆಲ ದಿನಗಳ ಹಿಂದೆ ನೀರೆ ಗ್ರಾಮದ ಹತ್ತಿರ ಪಂಚನಬೆಟ್ಟು ಎಂಬಲ್ಲಿ ಕಾಡುಕೋಣವೊಂದು ಪಾಳುಬಾವಿಗೆ ಬಿದ್ದಿದ್ದು, ಅದನ್ನು ಬಳಿಕ ಅರಣ್ಯ ಇಲಾಖೆಯವರು‌ ರಕ್ಷಣೆ ಮಾಡಿದ್ದರು. 

ಬೊಮ್ಮಾರಬೆಟ್ಟು, ನಿರೇ ಗ್ರಾಮ ಸಹಿತ ವಿವಿಧ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿದ್ದು, ಕಾಡು ಬಿಟ್ಟು ನಾಡಿಗೆ ಬರಲು ಆರಂಭಿಸಿವೆ. 

ಇದರಿಂದ ಜನರು ಆತಂಕದಿಂದಲೇ ದಿನ ಕಳೆಯುವಂತಾಗಿದೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು