12:35 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು