7:44 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು