8:29 AM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು