2:25 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಕಾರ್ಕಳ: ಪತಿ ಹಂತಕಿ ಪ್ರತಿಮಾಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು

17/06/2025, 10:40

ಕಾರ್ಕಳ(reporterkarnataka.com): ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಪತಿಯನ್ನು ಸಂಚು ಮಾಡಿ ಕೊಲೆ ಮಾಡಿದ ಆರೋಪಿ ಪತ್ನಿಗೆ ಹೈಕೋರ್ಟ್ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು ನೀಡಿದೆ.
ಮೃತ ಬಾಲಕೃಷ್ಣ ಪೂಜಾರಿಯ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಎಂಬವರು ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಅಕ್ಟೋಬರ್ 25ರಂದು ಅಜೆಕಾರು ಪೊಲೀಸ್ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ತನಿಖೆ ಸಂದರ್ಭದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಜೆಕಾರು ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.
ಇದೀಗ ರಾಜ್ಯ ಹೈಕೋರ್ಟ್, ಪ್ರಕರಣದ ಪರಿಶೀಲನೆಯ ನಂತರ, ಪ್ರತಿಮಾಳಿಗೆ ನಿಗದಿತ ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕಳೆದ ಕೆಲವು ತಿಂಗಳ ಹಿಂದೆ
ಪ್ರಿಯಕರ ದಿಲೀಪ್ ಹೆಗ್ಡೆ ಕೂಡ ಜಮೀನಿನ ಮೇಲೆ ಬಿಡುಗಡೆ ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು