11:51 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕಾರ್ಕಳ: ಪತಿ ಹಂತಕಿ ಪ್ರತಿಮಾಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು

17/06/2025, 10:40

ಕಾರ್ಕಳ(reporterkarnataka.com): ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಪತಿಯನ್ನು ಸಂಚು ಮಾಡಿ ಕೊಲೆ ಮಾಡಿದ ಆರೋಪಿ ಪತ್ನಿಗೆ ಹೈಕೋರ್ಟ್ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು ನೀಡಿದೆ.
ಮೃತ ಬಾಲಕೃಷ್ಣ ಪೂಜಾರಿಯ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಎಂಬವರು ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಅಕ್ಟೋಬರ್ 25ರಂದು ಅಜೆಕಾರು ಪೊಲೀಸ್ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ತನಿಖೆ ಸಂದರ್ಭದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಜೆಕಾರು ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.
ಇದೀಗ ರಾಜ್ಯ ಹೈಕೋರ್ಟ್, ಪ್ರಕರಣದ ಪರಿಶೀಲನೆಯ ನಂತರ, ಪ್ರತಿಮಾಳಿಗೆ ನಿಗದಿತ ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕಳೆದ ಕೆಲವು ತಿಂಗಳ ಹಿಂದೆ
ಪ್ರಿಯಕರ ದಿಲೀಪ್ ಹೆಗ್ಡೆ ಕೂಡ ಜಮೀನಿನ ಮೇಲೆ ಬಿಡುಗಡೆ ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು